ವೀರೇಶ ಕಾರ್ಯ ಶ್ಲಾಘನೀಯ: ಹುಕ್ಕೇರಿ ಶ್ರೀಗಳು

KannadaprabhaNewsNetwork |  
Published : Mar 12, 2024, 02:04 AM IST
ದದದ | Kannada Prabha

ಸಾರಾಂಶ

ಬೆಳಗಾವಿ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಸರ್ವ ಲೋಕ ಸೇವಾ ಫೌಂಡೇಶನ್ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರು ಬಡ ರೋಗಿಗಳಿಗೆ ಸಹಾಯ ಮಾಡುತ್ತಿರುವ ಸೇವೆಗೆ ಶ್ರೀಗಳು ಮಹಾ ಶಿವರಾತ್ರಿಯ ಪ್ರಯುಕ್ತ ಒಂದು ಸುಸಜ್ಜಿತ ಹಾಸಿಗೆಯುಳ್ಳ ಬೆಡ್ ಹಸ್ತಾಂತರಿಸಿ ಮಾತನಾಡಿದ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ.

ಕನ್ನಡಪ್ರಭ ವಾರ್ತೆ ಬೆಳಗಾವಿ

ತಮ್ಮ ವೈಯಕ್ತಿಕ ಜೀವನದ ಜೊತೆಗೆ ಸದಾ ಮುಖ ಪ್ರಾಣಿಗಳು, ಗಿಡ ಮರದ ಬುಡದಲ್ಲಿರುವ ದೇವರ ಫೋಟೋಗಳನ್ನು ವಿಸರ್ಜನೆ ಮಾಡಿ ಸಮಾಜ ಮುಖಿ ಕೆಲಸ ಮಾಡುತ್ತಿರುವ ಸರ್ವ ಲೋಕ ಸೇವಾ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರು ಬಡ ರೋಗಿಗಳಿಗೆ ಸಹಾಯ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.

ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಸರ್ವ ಲೋಕ ಸೇವಾ ಫೌಂಡೇಶನ್ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರು ಬಡ ರೋಗಿಗಳಿಗೆ ಸಹಾಯ ಮಾಡುತ್ತಿರುವ ಸೇವೆಗೆ ಶ್ರೀಗಳು ಮಹಾ ಶಿವರಾತ್ರಿಯ ಪ್ರಯುಕ್ತ ಒಂದು ಸುಸಜ್ಜಿತ ಹಾಸಿಗೆಯುಳ್ಳ ಬೆಡ್ ಹಸ್ತಾಂತರಿಸಿ ಮಾತನಾಡಿದ ಅವರು, ಸದಾ ಸಮಾಜ, ಬಡವರ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದಾರೆ. ಬಡ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಸರ್ವ ಲೋಕಾ ಸೇವಾ ಫೌಂಡೇಶನ್ ವೀಲ್‌ಚೇರ್, ಬೆಡ್, ಅಪಘಾತದಲ್ಲಿ ಗಾಯಗೊಂಡವರಿಗೆ ಹ್ಯಾಂಡ್ ಸ್ಟಿಕ್ ಸೇರಿದಂತೆ ಅನೇಕ ಕೆಲಸ ಕಾರ್ಯ ಮಾಡುತ್ತಿದ್ದಾರೆ. ಅವರ ಈ ಸೇವೆಗೆ ಶ್ರೀಮಠದಿಂದ ಸಣ್ಣ ಉಡುಗೊರೆ ನೀಡಲಾಗಿದೆ. ಅವರು ಇನ್ನಷ್ಟು ಹೆಚ್ಚಿನ ಬಡ ಜನರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡಲಿ ಎಂದು ಶುಭ ಹಾರೈಸಿದರು.

ಸರ್ವ ಲೋಕ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಮಾತನಾಡಿ, ನಾವು ಮಾಡುವ ಕೆಲಸಕ್ಕೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಮಾರ್ಗದರ್ಶನ. ಆಶೀರ್ವಾದ ಇದೆ. ಶ್ರೀಗಳು ನೀಡಿರುವ ಈ ದೊಡ್ಡ ಕೊಡುಗೆ ನನಗೆ ಮತ್ತಷ್ಟು ಸೇವೆ ಮಾಡುವ ಶಕ್ತಿ ಬಂದಿದೆ ಎಂದು ತಿಳಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ