ತಾಂತ್ರಿಕ ದೋಷದಿಂದ ವಾಹನಕ್ಕೆ ಬೆಂಕಿ, ನಾಲ್ವರು ಪಾರು

KannadaprabhaNewsNetwork |  
Published : Dec 31, 2024, 01:03 AM IST
ಮ | Kannada Prabha

ಸಾರಾಂಶ

ತಾಂತ್ರಿಕ ದೋಷದಿಂದ ವಾಹನವೊಂದಕ್ಕೆ ಬೆಂಕಿ ಸ್ಪರ್ಶಗೊಂಡು ಸುಟ್ಟು ಭಸ್ಮವಾಗಿದ್ದು, ಅದೃಷ್ಟವಶಾತ್ ಅದರಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಜರುಗಿದೆ.

ಕನ್ನಡಪ್ರಭ ವಾರ್ತೆ ಬ್ಯಾಡಗಿ

ತಾಂತ್ರಿಕ ದೋಷದಿಂದ ವಾಹನವೊಂದಕ್ಕೆ ಬೆಂಕಿ ಸ್ಪರ್ಶಗೊಂಡು ಸುಟ್ಟು ಭಸ್ಮವಾಗಿದ್ದು, ಅದೃಷ್ಟವಶಾತ್ ಅದರಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಜರುಗಿದೆ.

ಅನೀಸ ಉರ್ ರೆಹಮಾನ್ ಅವರ ಸ್ಕಾರ್ಪಿಯೋ ಕಾರು ಗೋವಾದಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ವೇಳೆ ಕೂಲೆಂಟ್‌ನಲ್ಲಾದ ಸಮಸ್ಯೆಯಿಂದ ಬೆಂಕಿ ಸ್ಪರ್ಶವಾದ ಬಗ್ಗೆ ಪೊಲೀಸರು ನೀಡಿದ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅದರಲ್ಲಿದ್ದ ನಾಲ್ವರು ಯುವಕರು ತಕ್ಷಣವೇ ಕೆಳಕ್ಕೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ಯಾಡಗಿಯಿಂದ ಅಗ್ನಿಶಾಮಕ ವಾಹನ ತೆರಳಿ ಬೆಂಕಿ ನಂದಿಸುವಷ್ಟರಲ್ಲಿ ಸ್ಕಾರ್ಪಿಯೋ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಘಟನೆ ಕುರಿತು ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!