ಕನ್ನಡಪ್ರಭ ವಾರ್ತೆ ಸಕಲೇಶಪುರ ಅಕ್ರಮವಾಗಿ ಬಿಲ್ಲೆಟ್ಸ್ಗಳನ್ನು ಸಾಗಿಸುತ್ತಿದ್ದ ವಾಹನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ವಲಯ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದೆ.ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ ಎಚ್. ಆರ್. ಹೇಮಂತ್ ಕುಮಾರ್ ನೇತೃತ್ವದಲ್ಲಿ ಅರಣ್ಯಇಲಾಖೆ ಸಿಬ್ಬಂದಿಗಳೊಂದಿಗೆ ಈ ಕಾರ್ಯಾಚರಣೆ ನಡೆಸಿ ವಾಹನವೊಂದರಲ್ಲಿ ಅಕ್ರಮವಾಗಿ ಬಿಲ್ಲೆಟ್ಸ್ಗಳನ್ನು ಸಾಗಿಸುತ್ತಿರುವುದು ಪತ್ತೆ ಮಾಡಿದ್ದಾರೆ. ಈ ವಾಹನವನ್ನು ತಕ್ಷಣ ವಶಕ್ಕೆ ಪಡೆದಿದ್ದು, ಈ ಸಂಬಂಧ ಅರಣ್ಯ ಇಲಾಖೆಯಿಂದ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಕೆ. ಮೋಹನ್ ಕುಮಾರ್, ಅರ್ಜುನ್, ಗಸ್ತು ಅರಣ್ಯಪಾಲಕರಾದ ಉಮೇಶ್, ಕುಮಾರ್, ಅರಣ್ಯ ವೀಕ್ಷಕರಾದ ಲೋಕೇಶ್ ಹಾಗೂ ಆರ್ಆರ್ಟಿ ಸಿಬ್ಬಂದಿ ಭಾಗವಹಿಸಿದ್ದರು.