ಕುಂದಾಪುರ - ತೀರ್ಥಹಳ್ಳಿ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಭೂಕುಸಿತ ಉಂಟಾಗಿದ್ದು, ಈ ಕಾಮಗಾರಿಯೂ ಪೂರ್ಣಗೊಳ್ಳುವರೆಗೆ ಈ ಘಾಟಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಡುಪಿ: ಕುಂದಾಪುರ - ತೀರ್ಥಹಳ್ಳಿ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟಿಯಲ್ಲಿ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಭೂಕುಸಿತ ಉಂಟಾಗಿದ್ದು, ಈ ಕಾಮಗಾರಿಯೂ ಪೂರ್ಣಗೊಳ್ಳುವರೆಗೆ ಈ ಘಾಟಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಏ. 9 ರಂದು ಈ ಘಾಟಿಯಲ್ಲಿ ತಡೆಗೋಡೆ - ರಸ್ತೆ ಅಗಲೀಕರಣ ಕಾಮಗಾರಿ ನಡೆಸುತ್ತಿದ್ದಾಗ ಸುಮಾರು 12 ಮೀಟರ್ ಎತ್ತರದಲ್ಲಿ ಹಾಲಿ ಇರುವ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಸುಮಾರು 5 ಅಡಿ ಅಗಲದವರೆಗೆ ಮತ್ತೊಮ್ಮೆ ಭೂ ಕುಸಿತ ಉಂಟಾಗಿ, ಕಾಂಕ್ರೀಟ್ ರಸ್ತೆಯ ಮೇಲ್ಮೈನಲ್ಲಿ ಬಿರುಕುಗಳು ಕಂಡುಬಂದಿವೆ, ಆದ್ದರಿಂದ ಪ್ರಸ್ತುತ ಕೈಗೊಳ್ಳುತ್ತಿರುವ ರಕ್ಷಣಾತ್ಮಕ ಕಾಮಗಾರಿಯ ಪೂರ್ಣಗೊಳ್ಳುವವರೆಗೆ, ಸಾರ್ವಜನಿಕ ಹಿತದೃಷ್ಟಿಯಿಂದ ತೀರ್ಥಹಳ್ಳಿ - ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ನ ಮೂಲಕ ಎಲ್ಲ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಪರ್ಯಾಯವಾಗಿ, ರಾಜ್ಯ ಹೆದ್ದಾರಿ 52 ರಸ್ತೆಯ ತೀರ್ಥಹಳ್ಳಿ - ರಾವೆ - ಕಾನುಗೋಡು - ಮಾಸ್ತಿಕಟ್ಟೆ - ಹುಲಿಕಲ್ ಘಾಟ್ - ಹೊಸಂಗಡಿ - ಸಿದ್ದಾಪುರ ಮೂಲಕ ಕುಂದಾಪುರ ನಡುವೆ ಸಂಚರಿಸುವ ವಾಹನಗಳು ತೀರ್ಥಹಳ್ಳಿ - ರಾವೆ - ಕಾನುಗೋಡು - ನಗರ - ಕೊಲ್ಲೂರು - ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕು.
ತೀರ್ಥಹಳ್ಳಿ - ಯಡೂರು- ಸುಳುಗೋಡು - ಮಾಸ್ತಿಕಟ್ಟೆ - ಹುಲಿಕಲ್ ಘಾಟ್ - ಹೊಸಂಗಡಿ - ಸಿದ್ದಾಪುರ - ಕುಂದಾಪುರ ನಡುವೆ ಸಂಚರಿಸುವ ವಾಹನಗಳು ತೀರ್ಥಹಳ್ಳಿ - ಯಡೂರು - ಮಾಸ್ತಿಕಟ್ಟೆ - ಕಾನುಗೋಡು - ನಗರ - ಕೊಲ್ಲೂರು - ಕುಂದಾಪುರ ರಸ್ತೆಯಲ್ಲಿ ಸಂಚರಿಸಬೇಕು. ಶಿವಮೊಗ್ಗ / ಸಾಗರ ಕಡೆಯಿಂದ ಹೊಸನಗರ - ನಗರ- ಮಾಸ್ತಿಕಟ್ಟೆ - ಹುಲಿಕಲ್ ಘಾಟ್ - ಹೊಸಂಗಡಿ - ಸಿದ್ಧಾಪುರ ಮೂಲಕ ಕುಂದಾಪುರ ನಡುವೆ ಸಂಚರಿಸುವ ವಾಹನಗಳು ಶಿವಮೊಗ್ಗ ಹೊನ್ನಾವರ ರಾಷ್ಟೀಯ ಹೆದ್ದಾರಿ ಮೂಲಕ ಹೊನ್ನಾವರ ಅನಂತರ ಹೊನ್ನಾವರದಿಂದ - ಭಟ್ಕಳ - ಬೈಂದೂರು ಕುಂದಾಪುರ ರಸ್ತೆಯಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.