ಕನ್ನಪ್ರಭ ವಾರ್ತೆ ರಾಯಚೂರು
ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಒಂದು ವಾರದ ಹಿಂದೆ ಕೃಷ್ಣಾನದಿ ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲು ಜ.10ರಿಂದ ರಸ್ತೆ ಸಂಚಾರ ಬಂದ್ ಮಾಡಲು ಸಭೆ ಮಾಡಿ ತಿಳಿಸಲಾಗಿತ್ತು. ಕೃಷ್ಣಾನದಿ ಸೇತುವೆ ಮೇಲಿನ ಸಂಚಾರ ನಿಷೇಧಿಸಲಾಗಿತ್ತು. ಸಾರ್ವಜನಿಕರು ಈ ಬಗ್ಗೆ ಮರು ಪರಿಶೀಲಿಸಲು ಮನವಿ ಮಾಡಿದ್ದರು. ಈ ಕುರಿತು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರೊಂದಿಗೆ 14ರಂದು ಸಂಕ್ರಾಂತಿ ಹಬ್ಬ ಇರುವುದರಿಂದ ಜನರು ಸ್ನಾನಕ್ಕಾಗಿ ಕೃಷ್ಣಾ ನದಿಗೆ ತೆರಳುತ್ತಾರೆ. ಜೊತೆಗೆ ಯಾದಗಿರಿ ಜಿಲ್ಲೆಯ ಮೈಲಾಪೂರ ಮಲ್ಲಯ್ಯ ಜಾತ್ರೆ ಇದ್ದು, ಸಾವಿರಾರು ಭಕ್ತರು ಕೃಷ್ಣಾ ಸೇತುವೆ ಮಾರ್ಗದಲ್ಲಿ ತೆರಳುತ್ತಾರೆ. ಈ ಹಿನ್ನೆಲೆಯಲ್ಲಿ ಜ.17 ರವರೆಗೆ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಇದಕ್ಕೆ ಜಿಲ್ಲಾಧಿಕಾರಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.