ವೇಮಗಲ್ ಪಪಂ ಸೋಲು ಸವಾಲಾಗಿ ಸ್ವೀಕರಿಸಿ

KannadaprabhaNewsNetwork |  
Published : Aug 25, 2025, 01:00 AM IST
೨೪ಕೆಎಲ್‌ಆರ್-೫ಕೋಲಾರ ತಾಲೂಕು ವೇಮಗಲ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್‌ರ ಮನೆಯಲ್ಲಿ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಆತ್ಮಾವಲೋಕನ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಚುನಾವಣೆಯ ಪೂರ್ವದಲ್ಲಿ ಹೇಳಿದ ಅಷ್ಟು ಅಭಿವೃದ್ಧಿ ಕೆಲಸಗಳನ್ನೂ ಮಾಡತ್ತೇವೆ, ಕಾಂಗ್ರೆಸ್ ಸೋತಿದೆ ಅಭಿವೃದ್ಧಿ ಮಾಡಲ್ಲ ಎಂದು ಕಾಂಗ್ರೆಸ್ ವಿರೋಧಿಗಳು ಅಪಪ್ರಚಾರ ಮಾಡಿದ್ದಾರೆ ಅದಕ್ಕೆ ಯಾರು ಕಿವಿ ಕೊಡಬೇಡಿ ನಾವು ನಿಮ್ಮದೊಂದಿಗೆ ಇದ್ದೇವೆ ಸೋತವರಿಗೂ ಹಾಗೂ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದವರಿಗೆ ಬೇರೆ ಬೇರೆ ಅವಕಾಶಗಳನ್ನು ನೀಡಲಾಗುತ್ತದೆ.

ಕನ್ನಡಪ್ರಭ ವಾರ್ತೆ ಕೋಲಾರವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆ ಸೋಲಿನಿಂದಾಗಿ ಕಾಂಗ್ರೆಸ್ ನಿರಾಸೆಪಡಬೇಕಾಗಿಲ್ಲ, ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಿಂತಲೂ ಹೆಚ್ಚಿನ ಮತಗಳನ್ನು ಪಡೆದಿದ್ದೇವೆ, ಯಾರನ್ನು ಹೊಣೆಗಾರಿಕೆ ಮಾಡುವುದು ಬೇಡ, ಪರಾಜಿತ ಅಭ್ಯರ್ಥಿಗಳನ್ನು ಬಿಟ್ಟುಕೊಡುವುದಿಲ್ಲ, ವಾರ್ಡ್‌ಗಳಲ್ಲಿ ನಿಮಗೆ ಜವಾಬ್ದಾರಿ ವಹಿಸುತ್ತೇವೆ, ಒಟ್ಟಿಗೆ ಸೇರಿ ಅಭಿವೃದ್ಧಿ ಮಾಡೋಣ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.ತಾಲೂಕಿನ ವೇಮಗಲ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್‌ ನಿವಾಸದಲ್ಲಿ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದರು.ಭರವಸೆ ಈಡೇರಿಸುತ್ತೇವೆ

ಚುನಾವಣೆಯ ಪೂರ್ವದಲ್ಲಿ ಹೇಳಿದ ಅಷ್ಟು ಅಭಿವೃದ್ಧಿ ಕೆಲಸಗಳನ್ನೂ ಮಾಡತ್ತೇವೆ, ಕಾಂಗ್ರೆಸ್ ಸೋತಿದೆ ಅಭಿವೃದ್ಧಿ ಮಾಡಲ್ಲ ಎಂದು ಕಾಂಗ್ರೆಸ್ ವಿರೋಧಿಗಳು ಅಪಪ್ರಚಾರ ಮಾಡಿದ್ದಾರೆ ಅದಕ್ಕೆ ಯಾರು ಕಿವಿ ಕೊಡಬೇಡಿ ನಾವು ನಿಮ್ಮದೊಂದಿಗೆ ಇದ್ದೇವೆ ಸೋತವರಿಗೂ ಹಾಗೂ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದವರಿಗೆ ಬೇರೆ ಬೇರೆ ಅವಕಾಶಗಳನ್ನು ನೀಡಲಾಗುತ್ತದೆ ಯಾರು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದರು. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಯಾವುದೇ ಕಾರಣಕ್ಕೂ ಕುಗ್ಗದೆ ಇಂದಿನ ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂಬರುವ ಚುನಾವಣೆಗೆ ಪಕ್ಷವನ್ನು ಸಂಘಟಿಸೋಣ. ಜೊತೆಗೆ ಎರಡು ತಿಂಗಳಿಗೊಮ್ಮೆ ನಿಮ್ಮ ವಾರ್ಡ್ ಗಳಲ್ಲಿಯೇ ಮುಖಂಡರು ಕಾರ್ಯಕರ್ತರ ಸಭೆ ಮಾಡಿ ಪಕ್ಷವನ್ನು ಸಂಘಟಿಸಿ ಅಭಿವೃದ್ಧಿಗಾಗಿ ಕೆಲಸ ಮಾಡೋಣ ಎಂದರುಅಭಿವೃದ್ಧಿ ಕಾರ್ಯ ಕೈಹಿಡಿಯಲಿಲ್ಲ

ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಚುನಾವಣೆಯಲ್ಲಿ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆಯಲಾಗಿತ್ತು ಜೊತೆಗೆ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಕೈ ಹಿಡಿಯಲಿವೆ ಎಂದು ಭಾವಿಸಲಾಗಿತ್ತು, ಆದರೂ ಸೋಲಾಗಿದೆ. ಇವತ್ತು ಬಿಜೆಪಿ ಮತ್ತು ಜೆಡಿಎಸ್ ಎರಡು ಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ಏಕಾಂಗಿಯಾಗಿ ಎದುರಿಸಿದ್ದರಿಂದ ಸೋಲಾಗಿದೆ, ಸೋಲಿಗೆ ನಾನಾಕಾರಣಗಳು ಇವೆ. ಸೋತವರಿಗೆ ಹೆಚ್ಚಿನ ಜವಾಬ್ದಾರಿ ಇದೆ. ಕಾಂಗ್ರೆಸ್ ಸರ್ಕಾರ ನಿಮ್ಮ ಜೊತೆಗೆ ಇದೆ, ಈ ಚುನಾವಣೆಯಲ್ಲಿ ನಮ್ಮ ಜೊತೆ ಹಗಲಿರುಳೆನ್ನದೆ ಶ್ರಮಿಸಿದವರಿಗೆ ಧನ್ಯವಾದ ಅರ್ಪಿಸಿ ಜೊತೆಯಲ್ಲಿ ಕರೆದುಕೊಂಡು ಅಭಿವೃದ್ಧಿಗೆ ಕೈ ಜೋಡಿಸೋಣ ಎಂದರುಸೋಲಿನಿಂದ ಆತ್ಮಸ್ಥೈರ್ಯ ಹೆಚ್ಚಳ

ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿ, ಜನರ ಸೇವೆ ಮಾಡಲು ಅಧಿಕಾರವೊಂದೇ ಮಾನದಂಡವಲ್ಲ, ಕಾಂಗ್ರೆಸ್ ಚುನಾವಣೆಯ ಫಲಿತಾಂಶದಲ್ಲಿ ಸೋತಿರಬಹುದು, ಆದರೆ ಈ ಸೋಲಿಗೆ ನಮ್ಮಲ್ಲಿನ ಆತ್ಮಸ್ಥೈರ್ಯ ಹೆಚ್ಚಿಸಿದೆ ಸೋಲಿಗೆ ಏನು ಕಾರಣವಾಯಿತು, ಏನು ಮಾಡಬೇಕಾಗಿತ್ತು ಎಲ್ಲಿ ಎಡವಿದ್ದೇವೆ ಮುಂದೆ ಯಾವ ವಿಚಾರಗಳನ್ನು ಸರಿಪಡಿಸಿಕೊಳ್ಳಬೇಕು ಮುಂದೆ ಪ್ರತಿ ವಾರ್ಡ್‌ನಲ್ಲಿ ಏಳೆಂಟು ಜನರ ಸಮಿತಿ ಮಾಡಿ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗೆ ನಿರಂತರವಾಗಿ ಸಭೆ ಮಾಡೋಣ ಎಂದರು.ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಬ್ಲಾಕ್ ಅಧ್ಯಕ್ಷ ಉದಯಶಂಕರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ.ಶಿವಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಖಾದ್ರಿಪುರ ಬಾಬು, ಕುರಬರಹಳ್ಳಿ ಕುಮಾರ್, ಮಡಿವಾಳ ಮುನಿರಾಜು, ಮೈಲಾಂಡಹಳ್ಳಿ ಮುರಳಿ, ಪೆರ್ಜೇನಹಳ್ಳಿ ನಾಗೇಶ್, ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯರಾದ ಅಂಜಲಿ ಪ್ರಕಾಶ್, ಗಂಗಪ್ಪ, ಮಡಿವಾಳ ಮಂಜುಳಾ ತಾಸುಫ್ ಖಾನ್, ದೀಪ, ಶಶಿಕಲಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡ್ರಗ್ಸ್‌ ಆರ್ಭಟಕ್ಕೆ ಮದ್ಯ ಮಾರಾಟವೇ ಕುಸಿತ!
24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅಸ್ತು : ಸಿದ್ದರಾಮಯ್ಯ