ಮಾನವ ಕುಲದ ಏಳ್ಗೆಗಾಗಿ ಶ್ರಮಿಸಿದ ವೇಮನ: ಶಾಸಕ ಪಾಟೀಲ

KannadaprabhaNewsNetwork |  
Published : Jan 21, 2026, 03:00 AM IST
ಫೋಟೋ19ಕೆಎಸಟಿ4: ಕುಷ್ಟಗಿ ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ವೇಮನ ಜಯಂತಿಯನ್ನು ಆಚರಿಸಲಾಯಿತು. | Kannada Prabha

ಸಾರಾಂಶ

ಕನ್ನಡದಲ್ಲಿ ಸರ್ವಜ್ಞ ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ವಚನಕಾರರು ಮಹಾಕವಿ ಮಹಾಯೋಗಿ

ಕುಷ್ಟಗಿ: ಮಹಾಯೋಗಿ ವೇಮನರು 15ನೆಯ ಶತಮಾನದಲ್ಲಿ ಆಂಧ್ರ ಪ್ರದೇಶದ ತೆಲುಗಿನ ಶ್ರೇಷ್ಠ ವಚನಕಾರ, ಕವಿ, ಸಮಾಜ ಚಿಂತಕರು, ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದ್ದಾರೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ನಡೆದ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡದಲ್ಲಿ ಸರ್ವಜ್ಞ ತಮಿಳಿನ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನ ವಚನಕಾರರು ಮಹಾಕವಿ ಮಹಾಯೋಗಿಯಾಗಿದ್ದಾರೆ. ಮಹಾಯೋಗಿ ವೇಮನರು ಲೋಕ ಶಾಂತಿ ಸಾರಿದ ಮಹಾತ್ಮರು ಎಂದರು.

ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ತಹಸೀಲ್ದಾರ್‌ ಅಶೋಕ ಶಿಗ್ಗಾಂವಿ, ಯುವ ಮುಖಂಡ ದೊಡ್ಡಬಸವನಗೌಡ ಬಯ್ಯಾಪುರ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೋಲ್ಡನ್‌ ಅವರ್‌ನಲ್ಲಿ ವಂಚಕರ ಪಾಲಾಗುತ್ತಿದ್ದ 2.16 ಕೋಟಿ ರು ವಾಪಸ್
ಇಂದಿನಿಂದ ಲಂಡನ್‌ ಮಾದರಿ ಡಬಲ್‌ ಡೆಕ್ಕರ್‌ ಬಸ್‌ ಸಂಚಾರ