ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್‌ ಝೋನ್‌

KannadaprabhaNewsNetwork |  
Published : Nov 29, 2024, 01:01 AM IST
ವಿಜಯಪುರದಲ್ಲಿ ಬೀದಿ ಬದಿ ವ್ಯಾಪಾರಸ್ಥರರೊಂದಿಗೆ ಮಹಾನಗರ ಪಾಲಿಕೆ ಆಯುಕ್ತರು ಭೇಟಿ ನೀಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್ ಜಾಗದ ವ್ಯವಸ್ಥೆ ಹಾಗೂ ಆಟೋ ರಿಕ್ಷಾ- ದ್ವಿಚಕ್ರ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಜಾಗ ಗುರುತಿಸಲಾಗಿದೆ. ಅಲ್ಲದೇ, ಆ ಸೂಚಿಸಿರುವ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಕೈಗೊಳ್ಳದೇ ಇರುವುದು ಮತ್ತು ನಿಗದಿತ ಸ್ಥಳಗಳಲ್ಲಿ ಚಾಲಕರು ವಾಹನಗಳನ್ನು ನಿಲುಗಡೆ ಮಾಡದೇ ಇರುವುದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್ ಜಾಗದ ವ್ಯವಸ್ಥೆ ಹಾಗೂ ಆಟೋ ರಿಕ್ಷಾ- ದ್ವಿಚಕ್ರ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಜಾಗ ಗುರುತಿಸಲಾಗಿದೆ. ಅಲ್ಲದೇ, ಆ ಸೂಚಿಸಿರುವ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಕೈಗೊಳ್ಳದೇ ಇರುವುದು ಮತ್ತು ನಿಗದಿತ ಸ್ಥಳಗಳಲ್ಲಿ ಚಾಲಕರು ವಾಹನಗಳನ್ನು ನಿಲುಗಡೆ ಮಾಡದೇ ಇರುವುದು ಕಂಡು ಬಂದಲ್ಲಿ ಅಂತಹವರ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ ನೀಡಿದರು.

ನಗರದಲ್ಲಿ ಬೀದಿ ಬದಿ ವ್ಯಾಪಾರಸ್ಥರು ಎಲ್ಲೆಂದರಲ್ಲಿ ಬೇಕಾದ ಸ್ಥಳಗಳಲ್ಲಿ ವ್ಯಾಪಾರ ಮಾಡುವುದನ್ನು ನಿಯಂತ್ರಿಸಲು ಉಚ್ಛನ್ಯಾಯಾಲಯದ ಆದೇಶದಂತೆ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಮಹಾಪೌರರರ ಮಾರ್ಗದರ್ಶನ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದರು.ಈ ನಿಟ್ಟಿನಲ್ಲಿ ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ.ಆರ್.ಹೋಟೆಲ್ ಹತ್ತಿರ, ಕೆಎಸ್‌ಆರ್‌ಟಿಸಿ ಡಿಪೋ ಪಕ್ಕ, ಅಂಬೇಡ್ಕರ್ ಕ್ರೀಡಾಂಗಣದ ಎದುರುಗಡೆ, ಸೈನಿಕ ಶಾಲೆ, ಜಿಮ್‌ಖಾನಾ ಕ್ಲಬ್ ಹಿಂಭಾಗ ಹಾಗೂ ಆಹಾರ ಮಾರಾಟಕ್ಕೆ ಇಂಡಿ ರೋಡ್‌ ಕ್ರೀಡಾಂಗಣದ ಹತ್ತಿರ, ಜಾಗಗಳನ್ನು ಗುರುತಿಸಲಾಗಿದೆ. ಈ ಸ್ಥಳಕ್ಕೆ ಬೀದಿ ಬದಿ ವ್ಯಾಪಾರಸ್ಥರರೊಂದಿಗೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರು ಸಂತಸ ವ್ಯಕ್ತಪಡಿಸಿದ್ದಲ್ಲದೇ, ಮುಂದಿನ ದಿನಗಳಲ್ಲಿ ಈ ಜಾಗಗಳಲ್ಲಿಯೇ ವ್ಯಾಪಾರ ಕೈಗೊಳ್ಳುವುದಾಗಿ ಸೂಚಿಸಿದರು.

ನಗರದಲ್ಲಿ ಜನದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರು, ಆಟೋ ಮತ್ತು ಇತರೆ ದ್ವಿಚಕ್ರ ವಾಹನಗಳ ಮಾಲೀಕರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವಾಹನಗಳನ್ನು ನಿಲುಗಡೆ ಮಾಡಬೇಕು. ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡಬಾರದು. ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಚಾರ ಪೊಲೀಸ್‌ ಅಧಿಕಾರಿಗಳಿಗೆ ಹೆಚ್ಚುವರಿ ಪೊಲಿಸ್ ವರಿಷ್ಠಾಧಿಕಾರಿಗಳು ಸೂಚನೆ ನೀಡಿದರು. ಅಲ್ಲದೇ, ವೆಂಡಿಂಗ್ ಝೋನ್‌ಗಳಲ್ಲಿ ಮಾತ್ರ ವ್ಯಾಪಾರ ವಹಿವಾಟು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ವಾಹನ ನಿಲುಗಡೆ ಹಾಗೂ ವ್ಯಾಪಾರ ವಹಿವಾಟು ಮಾಡದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಂಡು ಸೂಕ್ತ ದಂಡ ವಿಧಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮುಂತಾದವರು ಇದ್ದರು.

-----------

ಬಾಕ್ಸ್‌

ಪೊಲೀಸರಿಂದ ಕಟ್ಟುನಿಟ್ಟಿನ ಸೂಚನೆ

ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವಾಹನಗಳನ್ನು ನಿಲುಗಡೆ ಮಾಡಬೇಕು. ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡಬಾರದು. ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಚಾರ ಪೊಲೀಸ್‌ ಅಧಿಕಾರಿಗಳಿಗೆ ಹೆಚ್ಚುವರಿ ಪೊಲಿಸ್ ವರಿಷ್ಠಾಧಿಕಾರಿಗಳು ಸೂಚನೆ ನೀಡಿದರು. ಅಲ್ಲದೇ, ವೆಂಡಿಂಗ್ ಝೋನ್‌ಗಳಲ್ಲಿ ಮಾತ್ರ ವ್ಯಾಪಾರ ವಹಿವಾಟು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ವಾಹನ ನಿಲುಗಡೆ ಹಾಗೂ ವ್ಯಾಪಾರ ವಹಿವಾಟು ಮಾಡದವರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.

PREV

Recommended Stories

ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಟಾಕ್ಸಿಕ್‌ ಮುಂಬೈ ಶೂಟ್‌ ಮುಗಿಸಿ ಲಂಡನ್‌ಗೆ ಹಾರಿದ ಯಶ್‌