ವೆಂಕಟೇಶ್ವರ ಏತ ನೀರಾವರಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸಮೀಪದ ಕುಲಹಳ್ಳಿಯಲ್ಲಿರುವ ಏತ ನೀರಾವರಿ ಕೇಂದ್ರದಲ್ಲಿ ನೀರು ಪೂರೈಕೆಯ ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಜಮಖಂಡಿ, ಮುಧೋಳ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ ಬಹು ನಿರೀಕ್ಷಿತ ವೆಂಕಟೇಶ್ವರ ಏತ ನೀರಾವರಿಗೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಸಮೀಪದ ಕುಲಹಳ್ಳಿಯಲ್ಲಿರುವ ಏತ ನೀರಾವರಿ ಕೇಂದ್ರದಲ್ಲಿ ನೀರು ಪೂರೈಕೆಯ ಬಟನ್ ಒತ್ತುವ ಮೂಲಕ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ೨೦೧೭ರಲ್ಲಿ ಪ್ರಾರಂಭವಾದ ಕಾಮಗಾರಿಗೆ ಒಟ್ಟು ₹ ೫೪ ಕೋಟಿ ವೆಚ್ಚದಲ್ಲಿ ಸಾಕಾರವಾದ ಈ ಯೋಜನೆಯಿಂದ ಒಟ್ಟು ೧೨೦೦ ಹೆಕ್ಟೇರ್ ಜಮೀನು ನೀರಾವರಿಯಾಗಲಿದೆ. ಮೂರು ತಾಲೂಕುಗಳ ಸುಮಾರು ೧೪ ಗ್ರಾಮಗಳ ರೈತರಿಗೆ ಇದರಿಂದ ಅನುಕೂಲವಾಗಲಿದೆ. ಒಣಭೂಮಿ ಹೊಂದಿರುವ ಈ ಭಾಗದ ರೈತರಿಗೆ ನೀರಾವರಿ ಸೌಕರ್ಯ ಲಭಿಸಿ ಬಾಳು ಬಂಗಾರವಾಗಲಿದೆ ಎಂದ ಅವರು, ಈ ಯೋಜನೆ ಅನುಷ್ಠಾನದಲ್ಲಿ ಮಾಜಿ ಸಚಿವೆ ಉಮಾಶ್ರೀಯವರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.