ಹಿರಿಯ ಹೋರಾಟಗಾರ ಭೀಮಶಿ ಕಲಾದಗಿ ನಿಧನ

KannadaprabhaNewsNetwork |  
Published : Aug 07, 2024, 01:07 AM IST
ಹೋರಾಟಗಾರ ಬೀಮಶಿ ಕಲಾದಗಿ ನಿಧನ | Kannada Prabha

ಸಾರಾಂಶ

ವಿಜಯಪುರ: ಜಿಲ್ಲೆಯ ಹಿರಿಯ ಹೋರಾಟಗಾರ, ಕಮ್ಯುನಿಸ್ಟ್‌ ಮುಖಂಡ ಭೀಮಶಿ ಕಲಾದಗಿ(87) ಸೋಮವಾರ ರಾತ್ರಿ ವಿಧಿವಶರಾಗಿದ್ದಾರೆ. ತಮ್ಮ ಜನಪರ ಹೋರಾಟಗಳಿಂದ ನಾಡಿನಲ್ಲಿ ಹೆಸರಾಗಿದ್ದ ಭೀಮಶಿ ಕಲಾದಗಿ ಅವರು ಬರಗಾಲ ಭೀಮಶಿಯೆಂದೇ ಖ್ಯಾತರಾಗಿದ್ದರು. ಜಿಲ್ಲೆಯ ಮುಳವಾಡ ಏತ ನೀರಾವರಿ ಸೇರಿದಂತೆ ಜಿಲ್ಲೆಯ ಸಮಗ್ರ ನೀರಾವರಿಗಾಗಿ, ರೈತರಿಗಾಗಿ, ಕಾರ್ಮಿಕರಿಗಾಗಿ, ದಲಿತರಿಗಾಗಿ ಜೀವನವಿಡಿ ಹೋರಾಟ ಮಾಡಿದ್ದರು. ಅವರ ಅಗಲಿಕೆಯಿಂದ ಹಿರಿಯ ಹೋರಾಟದ ಕೊಂಡಿಯೊಂದು ಕಳಚಿದಂತಾಗಿದೆ‌‌‌.

ವಿಜಯಪುರ: ಜಿಲ್ಲೆಯ ಹಿರಿಯ ಹೋರಾಟಗಾರ, ಕಮ್ಯುನಿಸ್ಟ್‌ ಮುಖಂಡ ಭೀಮಶಿ ಕಲಾದಗಿ(87) ಸೋಮವಾರ ರಾತ್ರಿ ವಿಧಿವಶರಾಗಿದ್ದಾರೆ. ತಮ್ಮ ಜನಪರ ಹೋರಾಟಗಳಿಂದ ನಾಡಿನಲ್ಲಿ ಹೆಸರಾಗಿದ್ದ ಭೀಮಶಿ ಕಲಾದಗಿ ಅವರು ಬರಗಾಲ ಭೀಮಶಿಯೆಂದೇ ಖ್ಯಾತರಾಗಿದ್ದರು. ಜಿಲ್ಲೆಯ ಮುಳವಾಡ ಏತ ನೀರಾವರಿ ಸೇರಿದಂತೆ ಜಿಲ್ಲೆಯ ಸಮಗ್ರ ನೀರಾವರಿಗಾಗಿ, ರೈತರಿಗಾಗಿ, ಕಾರ್ಮಿಕರಿಗಾಗಿ, ದಲಿತರಿಗಾಗಿ ಜೀವನವಿಡಿ ಹೋರಾಟ ಮಾಡಿದ್ದರು. ಅವರ ಅಗಲಿಕೆಯಿಂದ ಹಿರಿಯ ಹೋರಾಟದ ಕೊಂಡಿಯೊಂದು ಕಳಚಿದಂತಾಗಿದೆ‌‌‌.

ತಮ್ಮ ನೇರ ನಡೆ- ನುಡಿ, ಹೋರಾಟದಿಂದ ಆಳುವ ವರ್ಗ ಹಾಗೂ ಸರ್ಕಾರಗಳನ್ನು ಬಡಿದೆಬ್ಬಿಸುತ್ತಿದ್ದರು‌‌. ಇಂತಹ ಹಿರಿಯ ಹೋರಾಟದ ಚೇತನ ಇಹಲೋಕ ತ್ಯಜಿಸಿದಕ್ಕೆ ಜಿಲ್ಲೆಯ ಜನಪ್ರತಿನಿಧಿ, ಮುಖಂಡರು ಹಾಗೂ ಅವರ ಅಭಿಮಾನಿ ವರ್ಗ ಕಂಬನಿ ಮಿಡಿದಿದೆ.

ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅತ್ಯಕ್ರಿಯೆಯನ್ನು ಇಂಡಿ ತಾಲೂಕಿನ ನಿಂಬಾಳ ಗ್ರಾಮದಲ್ಲಿ ಮಂಗಳವಾರ ನೆರವೇರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಟುಂಬ ಹಾಳು ಮಾಡುತ್ತಿರುವ ಪ್ರೇಮಿಗಳ ದಿನ
ರಾಜಕೀಯ ಬದುಕಿಗೆ ಜನ್ಮ ನೀಡಿದ್ದು ಗ್ರಾಮೀಣ ಕ್ಷೇತ್ರ