ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ಕುರಿತು ಅನಿಮಲ್ ರೈಟ್ಸ್ ಫಂಡ್ ಹಾಗೂ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಸೇರಿದಂತೆ ಮತ್ತಿತರರು ಪ್ರತ್ಯೇಕವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು, ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು.
ಈ ವೇಳೆ ಅರ್ಜಿದಾರರ ಪರ ವಕೀಲರು, ನಗರದಲ್ಲಿ ಪ್ರತಿ ನಿತ್ಯ ಸುಮಾರು 600ರಿಂದ 700 ಸಾಕು ಪ್ರಾಣಿಗಳು ಅನಾರೋಗ್ಯಕ್ಕೆ ಒಳಗಾಗುತ್ತಿವೆ. ಅವುಗಳಿಗೆ ಅಗತ್ಯ ಚಿಕಿತ್ಸೆ ನೀಡಬೇಕು. ಹೀಗಿರುವಾಗ ನಗರದಲ್ಲಿರುವ ಪಶು ವೈದ್ಯಕೀಯ ಆಸ್ಪತ್ರೆಗಳನ್ನು ಬೇರೆಡೆಗೆ ಸ್ಥಳಾಂತರಕ್ಕೆ ಮುಂದಾಗಿರುವ ಸರ್ಕಾರದ ಕ್ರಮ ಸರಿಯಲ್ಲ. ಈ ನಿರ್ಧಾರದಿಂದ ತಮ್ಮ ಪಶುಗಳಿಗೆ ಹಾಗೂ ಸಾಕು ಪ್ರಾಣಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುವ ಸ್ಥಿತಿ ಬಂದೊದಗಿದೆ. ಇದು ರೈತರು ಹಾಗೂ ಸಾಕು ಪ್ರಾಣಿಯ ಮಾಲೀಕರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ಹಾಗಾಗಿ, ಪಶು ಚಿಕಿತ್ಸಾಲಯಗಳನ್ನು ಸ್ಥಳಾಂತರಿಸಲು ಕೈಗೊಂಡಿರುವ ಸರ್ಕಾರದ ಕ್ರಮ ರದ್ದುಪಡಿಸಬೇಕು ಎಂದು ಕೋರಿದರು.ಸರ್ಕಾರದ ಪರ ವಕೀಲರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅ ಮನವಿ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆ.19ಕ್ಕೆ ಮುಂದೂಡಿತು.