ವಿಶ್ವ ಹಿಂದು ಪರಿಷತ್ ಯಾವುದೇ ಧರ್ಮ, ಸಮಾಜವನ್ನು ವಿರೋಧಿಸುವುದಿಲ್ಲ. ಹಿಂದು ಧರ್ಮ ಸಂಘಟನೆ, ಸಂರಕ್ಷಣೆ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದು ವಿಶ್ವ ಹಿಂದು ಪರಿಷತ್ ಬೆಳಗಾವಿ ವಿಭಾಗದ ಸಹಮಂತ್ರಿ ವಿಠಲ ಮಾಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಮೂಡಲಗಿ
ವಿಶ್ವ ಹಿಂದು ಪರಿಷತ್ ಯಾವುದೇ ಧರ್ಮ, ಸಮಾಜವನ್ನು ವಿರೋಧಿಸುವುದಿಲ್ಲ. ಹಿಂದು ಧರ್ಮ ಸಂಘಟನೆ, ಸಂರಕ್ಷಣೆ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದು ವಿಶ್ವ ಹಿಂದು ಪರಿಷತ್ ಬೆಳಗಾವಿ ವಿಭಾಗದ ಸಹಮಂತ್ರಿ ವಿಠಲ ಮಾಳಿ ಹೇಳಿದರು.
ಮಟ್ಟಣದ ಮಡ್ಡಿ ವೀರಭದ್ರೇಶ್ವರ ದೇವಸ್ಥಾನದ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ವಿಶ್ವ ಹಿಂದು ಪರಿಷತ್ ಮೂಡಲಗಿ ಪ್ರಖಂಡದಿಂದ ಆಯೋಜಿಸಿದ್ದ ವಿಶ್ವ ಹಿಂದು ಪರಿಷತ್ನ ಷಷ್ಟ್ಯಬ್ದಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಪರಿಷತ್ ದೇಶದಲ್ಲಿ ಸಾಮರಸ್ಯತೆ, ಸಂಸ್ಕೃತಿ, ಶಿಷ್ಟಾಚಾರ, ಪರಿಸರ ರಕ್ಷಣೆ ಹಾಗೂ ಸ್ವದೇಶ ಪ್ರೇಮ ಬೆಳೆಸುತ್ತಲಿದೆ ಎಂದರು.
ವಿಎಚ್ಪಿ ಸತ್ಸಂಗ ಪ್ರಮುಖ ದೇಶಪಾಂಡೆ ಮತ್ತು ಪ್ರಾಂತ ಸತ್ಸಂಗ ಪ್ರಮುಖ ರಾರಾಯಣ ಮಾತನಾಡಿ, ವಿಶ್ವ ಹಿಂದು ಪರಿಷತ್ 1964ರಲ್ಲಿ ಸ್ಥಾಪನೆಯಾಗಿ 60 ವಸಂತ ಕಳೆದಿದೆ. ಹಿಂದುಗಳು ಜಗತ್ತಿನ 40ಕ್ಕೂ ಅಧಿಕ ದೇಶಗಳಲ್ಲಿ ನೆಲೆಸಿದ್ದು, ವಿಶ್ವ ಮಟ್ಟದಲ್ಲಿ ಹಿಂದು ಸಮಾಜಕ್ಕೆ ಕಟಿಬದ್ಧರಾಗಿರಬೇಕು ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.