ವಿಹಿಂಪ ಷಷ್ಠಿಪೂರ್ತಿ ಸಮಾರೋಪ: ಕರಸೇವಕರಿಗೆ ಗೌರವ

KannadaprabhaNewsNetwork |  
Published : Sep 02, 2024, 02:17 AM IST
ಗೌರವ | Kannada Prabha

ಸಾರಾಂಶ

ಮೂಡುಬಿದಿರೆ ಪರಿಸರದಲ್ಲಿರುವ ೬೦ಕ್ಕೂ ಅಧಿಕ ಭಜನಾ ತಂಡಗಳನ್ನು, ವಿಹಿಂಪ ಪ್ರಖಂಡದಲ್ಲಿ ವಿವಿಧ ಹೊಣೆಗಾರಿಕೆ ನಿರ್ವಹಿಸಿದವರನ್ನು ಗುರುತಿಸಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ ವಿಶ್ವ ಹಿಂದೂ ಪರಿಷತ್‌ ಮೂಡುಬಿದಿರೆ ಪ್ರಖಂಡದ ವತಿಯಿಂದ ಇಲ್ಲಿನ ಕನ್ನಡ ಭವನದಲ್ಲಿ ಶನಿವಾರ ನಡೆದ ವಿಹಿಂಪ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಕಾರ್ಯಕ್ರಮದಲ್ಲಿ ಅಯೋಧ್ಯಾ ಕರಸೇವಕರನ್ನು ಗೌರವಿಸಲಾಯಿತು. ಮೂಡುಬಿದಿರೆ ಪರಿಸರದಲ್ಲಿರುವ ೬೦ಕ್ಕೂ ಅಧಿಕ ಭಜನಾ ತಂಡಗಳನ್ನು, ವಿಹಿಂಪ ಪ್ರಖಂಡದಲ್ಲಿ ವಿವಿಧ ಹೊಣೆಗಾರಿಕೆ ನಿರ್ವಹಿಸಿದವರನ್ನು ಗುರುತಿಸಿ ಗೌರವಿಸಲಾಯಿತು.

ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ವರ್ಯ ಸ್ವಾಮೀಜಿ ಸಮಾರಂಭದಲ್ಲಿ ಆಶೀರ್ವಚನ ನೀಡಿ ನಮ್ಮ ಸಂಸ್ಕೃತಿ ಜಗತ್ತಿಗೆ ಶ್ರೇಷ್ಠವಾದ ಸಂಸ್ಕೃತಿಯಾಗಿದೆ. ವಿಶ್ವಹಿಂದು ಪರಿಷತ್ ಭಾರತೀಯ ಸಂಸ್ಕೃತಿಯ ಉಳಿವು, ಗೋವುಗಳ ರಕ್ಷಣೆ, ಧರ್ಮದ ರಕ್ಷಣೆಯಲ್ಲಿರುವ ಮುಂಚೂಣಿ ಸಂಘಟನೆಯಾಗಿದೆ. ಧರ್ಮರಕ್ಷಣೆಯ ಕಾರ್ಯದೊಂದಿಗೆ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಸ್ಪಂದನೆ, ಸಂಕಷ್ಟದಲ್ಲಿರುವವರಿಗೆ ಮಿಡಿಯುವ ಮಹತ್ವದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ. ನಮ್ಮ ಪ್ರತಿಯೊಬ್ಬ ಹಿಂದು ಕೂಡಾ ಇದರ ಸದಸ್ಯತ್ವ ಪಡೆದುಕೊಳ್ಳಬೇಕು ಎಂದರು.

ವಿಹಿಂಪ ದಕ್ಷಿಣ ಪ್ರಾಂತದ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ದಿಕ್ಸೂಚಿ ಭಾಷಣ ಮಾಡಿ, ವಿಹಿಂಪ ಮತಾಂತರದ ವಿರುದ್ಧ ಹೋರಾಟ ಮಾಡುತ್ತಿದ್ದು ಕಳೆದ ೫೦ ವರ್ಷಗಳಲ್ಲಿ ಮತಾಂತರಗೊಂಡ ೬೦ಲಕ್ಷಕ್ಕೂ ಅಧಿಕ ಮಂದಿಯನ್ನು ಮಾತೃಧರ್ಮಕ್ಕೆ ಕರೆತರಲಾಗಿದೆ. ೭೦೦ ಶಾಲೆಗಳಲ್ಲಿ ರಾಮಾಯಣ ಮಹಾಭಾರತ ತರಗತಿಗಳನ್ನು ನಡೆಸಲಾಗುತ್ತಿದೆ. ಸತ್ಸಂಗದ ಮೂಲಕ ಧರ್ಮಜಾಗೃತಿಯೊಂದಿಗೆ ನೂರಾರು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಭಾರತದಲ್ಲಿ ದೊಡ್ಡ ಬದಲಾವಣೆಯನ್ನು ತಂದಿದೆ ಎಂದರು.

ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಅರ್ಚಕ ಅನಂತ ಕೃಷ್ಣ ಅಡಿಗಳ್ ಅಧ್ಯಕ್ಷತೆ ವಹಿಸಿದ್ದರು.

ವಿಹಿಂಪ ಪ್ರಾಂತ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಇದ್ದರು. ವಿಹಿಂಪ ಪ್ರಖಂಡ ಅಧ್ಯಕ್ಷ ಶ್ಯಾಮ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂದು ಚೇತನ್ ಬೋರುಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು. ಸಂಚಾಲಕ ಸುಚೇತನ್ ಜೈನ್ ಸ್ವಾಗತಿಸಿದರು. ಶಾಂತರಾಮ ಕುಡ್ವ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ