ಕನ್ನಡಪ್ರಭ ವಾರ್ತೆ ಮೇಲುಕೋಟೆ
ಅಂದು ಬೆಳಗ್ಗೆ 10 ಗಂಟೆಗೆ ಮೇಲುಕೋಟೆಗೆ ಆಗಮಿಸಲಿರುವ ಉಪರಾಷ್ಟ್ರಪತಿಗಳು ಚೆಲುವನಾರಾಯಣಸ್ವಾಮಿ ರಾಮಾನುಜಾರ್ಯರ ದರ್ಶನ ಪಡೆಯಲಿದ್ದಾರೆ. ದೇವಾಲಯದಲ್ಲಿ ಸಾಂಪ್ರದಾಯಿಕ ಪೂರ್ಣಕುಂಭಸ್ವಾಗತ ಬೀಳ್ಕೊಡುವಾಗ ರಾಜಾಶೀರ್ವಾದದ ಕಾರ್ಯಕ್ರಮ ಇರಲಿದೆ. 11ಗಂಟೆಗೆ ಮೇಲುಕೋಟೆಯಿಂದ ನಿರ್ಗಮಿಸಲಿದ್ದಾರೆ.
ಉಪರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಡೀಸಿ, ಎಸ್ಪಿ ಅವರು, ಪ್ರಾಥಮಿಕ ಆರೋಗ್ಯಕೇಂದ್ರದ ಮೈದಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಉದ್ದೇಶಿಸಿರುವ ಸ್ಥಳ ಪರಿಶೀಲಿಸಿದರು. ಹೆಲಪ್ಯಾಡನ್ನು ಅಚ್ಚುಕಟ್ಟಾಗಿ ಸಿದ್ಧ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.ಹೆಲಿಪ್ಯಾಡ್ನಿಂದ ದೇವಾಲಯಕ್ಕೆ ನೇರವಾಗಿ ಕರೆತಂದು ಪೂರ್ಣಕುಂಭಸ್ವಾಗತ ನೀಡಿ ದರ್ಶನ ಮಾಡಿಸಲು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಶೀಲಾ ಮತ್ತು ಪಾರುಪತ್ತೇಗಾರ್ ಸ್ಥಾನಾಚಾರ್ಯ ಶ್ರೀನಿವಾಸನರಸಿಂಹನ್ ಗುರೂಜಿಯೊಂದಿಗೆ ಚರ್ಚಿಸಿ ವ್ಯವಸ್ಥಿತ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಉಪರಾಷ್ಟ್ರಪತಿಗಳು ಬರುವ ರಸ್ತೆಮಾರ್ಗದಲ್ಲಿ ಯಾವುದೇ ಲೋಪವಾಗದಂತೆ ಪೊಲೀಸರು ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಪಾಂಡವಪುರ ಉಪವಿಭಾಗಾಧಿಕಾರಿ ಡಾ.ಶ್ರೀನಿವಾಸ್, ಪಾಂಡವಪುರ ತಹಸೀಲ್ದಾರ್ ಬಸವರೆಡ್ಡಪ್ಪ, ಮುಜರಾಯಿ ತಹಸೀಲ್ದಾರ್ ತಮ್ಮೇಗೌಡ, ದೇಗುಲದ ಇಒ ಶೀಲಾ, ಎಎಸ್ಪಿ ತಿಮ್ಮಯ್ಯ, ಡಿವೈಎಸ್.ಪಿ ಶಾಂತಮಲ್ಲಪ್ಪ, ಮೇಲುಕೋಟೆ ಸರ್ಕಲ್ ಶರತ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ:
ಅಂದು ರಾಮಾನುಜಾಚಾರ್ಯರ ಮಾಸ ತಿರುನಕ್ಷತ್ರ ಮಹೋತ್ಸವ ಚಿತ್ತಿರೈ ಆರಿದ್ರಾ ನಕ್ಷತ್ರವೂ ಇರುವ ಕಾರಣ ರಾಮಾನುಜಾಚಾರ್ಯರಿಗೆ ಬೆಳಗ್ಗೆ 9 ಗಂಟೆ ವೇಳೆಗೆ ಅಭಿಷೇಕ ನಡೆದು ಪೂಜಾ ಕೈಂಕರ್ಯ ಮುಕ್ತಾಯಗೊಳಿಸಲಾಗುತ್ತದೆ. ವಿಶೇಷ ಅಲಂಕಾರದಲ್ಲಿ ದರ್ಶನ ಮಾಡಲಿದ್ದಾರೆ. ದೇವಾಲಯದ ಸಾಂಪ್ರದಾಯಿಕ ಪದ್ಧತಿಯಂತೆ ಸ್ವಾಗತಿಸಿ ಸೇವೆ ಮಾಡಿಸುವಂತೆ ಸೂಚನೆ ನೀಡಲಾಗಿದೆ ಭಕ್ತರು ಈ ಬದಲಾವಣೆಯನ್ನು ಗಮನಿಸಿ ಸಹಕಾರ ನೀಡುವಂತೆ ಕೋರಿದ್ದಾರೆ.