ಜೆಡಿಎಸ್‌ಗೆ ಜಯ: ಕಾಂಗ್ರೆಸ್‌ಗೆ ಮುಖಭಂಗ

KannadaprabhaNewsNetwork | Published : Dec 31, 2023 1:30 AM

ಸಾರಾಂಶ

ಕನಕಪುರ: ನಗರಸಭೆಯ 5ನೇ ವಾರ್ಡ್‌ಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಜಯಭೇರಿ ಬಾರಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟಾಗಿದೆ.

ಕನಕಪುರ: ನಗರಸಭೆಯ 5ನೇ ವಾರ್ಡ್‌ಗೆ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಜಯಭೇರಿ ಬಾರಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟಾಗಿದೆ.

ನಗರದ 5ನೇ ವಾರ್ಡಿನ ನಗರಸಭೆ ಅಧ್ಯಕ್ಷರಾಗಿದ್ದ ಕೃಷ್ಣಪ್ಪನವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಿತು. ಚುನಾವಣಾ ಕಣದಲ್ಲಿ ಕಾಂಗ್ರೆಸ್‌ನ ಚಾಮರಾಜು, ಜೆಡಿಎಸ್‌ನ ಲೋಕೇಶ್, ಬಿಜೆಪಿಯಿಂದ ಶಿವರುದ್ರ ಸ್ಪರ್ಧಿಸಿದ್ದರು. ತೀವ್ರ ಕುತೂಹಲ ಮೂಡಿಸಿದ್ದ ತ್ರಿಕೋನ ಸ್ಪರ್ಧೆಯಲ್ಲಿ ಶನಿವಾರ ಫಲಿತಾಂಶ ಹೊರಬಿದ್ದಿದ್ದು ಜೆಡಿಎಸ್ ಅಭ್ಯರ್ಥಿ ಲೋಕೇಶ್ 50 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್‌ನ ಲೋಕೇಶ್ 569 ಮತಗಳು, ಕಾಂಗ್ರೆಸ್‌ನ ಚಾಮರಾಜು 519 ಮತಗಳು, ಬಿಜೆಪಿಯ ಶಿವರುದ್ರ 18 ಮತಗಳು ನೋಟಾ 09 ಮತಗಳು ಚಲಾವಣೆಗೊಂಡಿದ್ದವು.

ನಗರಸಭೆಯಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತ ಮತದಾರರು, ಜೆಡಿಎಸ್ಗೆ ಮತ ಕೊಟ್ಟು ಗೆಲ್ಲಿಸಿದ್ದಾರೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ನಾಗರಾಜು ಹಾಗೂ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಚಿನ್ನಸ್ವಾಮಿ ಹೇಳುತ್ತಾ, ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ವಿಜೇತ ಅಭ್ಯರ್ಥಿ ಲೋಕೇಶ್ ಮಾತನಾಡಿ, ನನ್ನ ಗೆಲುವಿಗೆ ಹಗಲಿರುಳೆನ್ನದೆ ದುಡಿದ ಎಲ್ಲಾ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಈ ಗೆಲುವು ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು ಈ ಫಲಿತಾಂಶ ಮರುಕಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಮುಖಂಡ ಚಿನ್ನಸ್ವಾಮಿ, ನಗರಸಭಾ ಸದಸ್ಯ ಸ್ಟುಡಿಯೋ ಚಂದ್ರು, ಗ್ರಾಪಂ ಸದಸ್ಯ ಜಯರಾಮೇಗೌಡ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಕೆ ಕೆ ಪಿ ಸುದ್ದಿ 01:

ನಗರಸಭೆ 5ನೇ ವಾರ್ಡ್ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಲೋಕೇಶ್, ಕಾಂಗ್ರೆಸ್ ಆಭ್ಯರ್ಥಿ ಚಾಮರಾಜು ವಿರುದ್ಧ 50 ಮತಗಳ ಅಂತರದಿಂದ ಜಯಗಳಿಸಿದರು.

Share this article