ಮುದ್ದಂಡ ಹಾಕಿ : ಕಾಳಿಮಾಡ, ತಾಪಂಡ, ಚೇನಂಡ ತಂಡಕ್ಕೆ ಗೆಲುವು

KannadaprabhaNewsNetwork |  
Published : Apr 06, 2025, 01:47 AM IST
ಚಿತ್ರ : 5ಎಂಡಿಕೆ8 : ಕೊಲ್ಲೀರ ಹಾಗೂ ಸೋಮಯಂಡ ತಂಡದ ನಡುವಿನ ಪಂದ್ಯ.  | Kannada Prabha

ಸಾರಾಂಶ

ಮುದ್ದಂಡ ಕಪ್‌ನ ಶನಿವಾರದ ಪಂದ್ಯದಲ್ಲಿ ಕಾಳಿಮಾಡ, ತಾಪಂಡ, ಚೇನಂಡ ತಂಡಗಳು ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮುದ್ದಂಡ ಹಾಕಿ ಕಪ್ ನ ಶನಿವಾರ ನಡೆದ ಪಂದ್ಯದಲ್ಲಿ ಕಾಳಿಮಾಡ, ತಾಪಂಡ, ಚೇನಂಡ ತಂಡಗಳು ಗೆಲುವು ಸಾಧಿಸಿ ಮುಂದಿನ ಸುತ್ತಿಗೆ ಪ್ರವೇಶಿಸಿವೆ.

ಅಪ್ಪಂಡೇರಂಡ ಮತ್ತು ಕಾಳಿಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಳಿಮಾಡ ತಂಡ 2-1 ಗೋಲುಗಳ ಅಂತರದಲ್ಲಿ ಗೆಲುವು ದಾಖಲಿಸಿತು. ತಾಪಂಡ ಮತ್ತು ಬಲ್ಲಂಡ ತಂಡಗಳ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ತಾಪಂಡ ಗೆಲುವು ಸಾಧಿಸಿತು. ಚೇನಂಡ ಮತ್ತು ಚೀಯಂಡಿರ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಚೇನಂಡ ಗೆಲುವು ಸಾಧಿಸಿತು. ಚೋಯಮಾಡಂಡ ಮತ್ತು ಮೂಡೇರ ತಂಡಗಳ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಚೋಯಮಾಡಂಡ ತಂಡ ಗೆಲುವು ದಾಖಲಿಸಿತು.

ಕಂಡ್ರತಂಡ ಮತ್ತು ಅಜ್ಜೇಟಿರ ತಂಡಗಳ ನಡುವಿನ ಪಂದ್ಯದಲ್ಲಿ 7-0 ಗೋಲುಗಳ ಅಂತರದಲ್ಲಿ ಅಜ್ಜೇಟಿರ ತಂಡ ಗೆಲುವು ಸಾಧಿಸಿತು. ಅಯ್ಯರಣಿಯಂಡ ಮತ್ತು ಕೋಳುಮಾಡಂಡ ನಡುವಿನ ಪಂದ್ಯದಲ್ಲಿ ಕೋಳುಮಾಡಂಡ 3-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು.

ಮುಕ್ಕಾಟಿರ (ಕಡಗದಾಳ್) ಹಾಗೂ ಗಾಂಡಂಗಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಮುಕ್ಕಾಟಿರ ತಂಡ ಜಯ ಸಾಧಿಸಿತು. ಚಂದುರ ಮತ್ತು ಪೊರ್ಕಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಚಂದುರ ಗೆಲುವು ದಾಖಲಿಸಿತು. ಮೂಕಂಡ ಮತ್ತು ಪುಟ್ಟಿಚಂಡ ತಂಡಗಳ ನಡುವಿನ ಪಂದ್ಯದಲ್ಲಿ ಮೂಕಂಡ ತಂಡ 1-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು.

ಪುಲಿಯಂಡ ಮತ್ತು ಕುಂಡ್ಯೋಳಂಡ ನಡುವಿನ ಪಂದ್ಯದಲ್ಲಿ ಟೈ ಬ್ರೇಕರ್‌ನಲ್ಲಿ 3-2 ಗೋಲುಗಳ ಅಂತರದಲ್ಲಿ ಕುಡ್ಯೋಳಂಡ ಗೆಲುವು ಸಾಧಿಸಿತು. ಚೆಂಗೇಟಿರ ಮತ್ತು ಮುಕ್ಕಾಟಿರ (ದೊಡ್ಡಪುಲಿಕೋಟು) ತಂಡಗಳ ನಡುವಿನ ಪಂದ್ಯದಲ್ಲಿ ಮುಕ್ಕಾಟಿರ ತಂಡ 4-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು.

ಅಳಮೇಂಗಡ ಮತ್ತು ಚೆರುವಾಳಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಚೆರುವಾಳಂಡ ಗೆಲುವು ಸಾಧಿಸಿತು. ಕಾಂಗೀರ ಮತ್ತು ಸಣ್ಣುವಂಡ ನಡುವಿನ ಪಂದ್ಯದಲ್ಲಿ ಸಣ್ಣುವಂಡ ತಂಡ 4-1 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು.

ಕೊಲ್ಲಿರ ಮತ್ತು ಸೋಮೆಯಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಸೋಮೆಯಂಡ ತಂಡ ಜಯ ಸಾಧಿಸಿತು. ಮಾಚಂಗಡ ಮತ್ತು ಅಲ್ಲಾರಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಲ್ಲಾರಂಡ ಜಯ ಸಾಧಿಸಿತು. ಬಿದ್ದೇರಿಯಂಡ ಮತ್ತು ಓಡಿಯಂಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಓಡಿಯಂಡ ತಂಡ ಗೆಲುವು ದಾಖಲಿಸಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''