ಎಲ್ಲ ಜನಾಂಗದ ಪ್ರೀತಿ,ವಿಶ್ವಾಸವೇ ನಮ್ಮ ಶಕ್ತಿ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದಾಗ ಮಾತ್ರ ಚುನಾವಣೆಗಳಲ್ಲಿ ಗೆಲ್ಲಲು ಸಾಧ್ಯವೆಂದು ಶಾಸಕ ಕೆ.ಎನ್.ರಾಜಣ್ಣ ಅಬಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಮಧುಗಿರಿ
ಎಲ್ಲ ಜನಾಂಗದ ಪ್ರೀತಿ,ವಿಶ್ವಾಸವೇ ನಮ್ಮ ಶಕ್ತಿ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದಾಗ ಮಾತ್ರ ಚುನಾವಣೆಗಳಲ್ಲಿ ಗೆಲ್ಲಲು ಸಾಧ್ಯವೆಂದು ಶಾಸಕ ಕೆ.ಎನ್.ರಾಜಣ್ಣ ಅಬಿಪ್ರಾಯಪಟ್ಟರು.
ತಾಲೂಕಿನ ಚಂದ್ರಗಿರಿಯಲ್ಲಿ ಆಯೋಜಿಸಿದ್ದ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಕಾರ್ಮಿಕರಿಗೆ ಸಲಕರಣೆ, ಗ್ರಾಮಸ್ಥರಿಗೆ ನಿವೇಶನಗಳ ಹಕ್ಕು ಪತ್ರ ವಿತರಿಸಿ ಮಾತನಾಡಿದರು.
ಅಭಿವೃದ್ಧಿಯೇ ನನ್ನ ಗುರಿ, ಚುನಾವಣೆಗಳಲ್ಲಿ ಜಾತಿ, ಸುಳ್ಳು ಭರವಸೆಗಳಿಗೆ ಜನ ಮತ ಹಾಕುವುದಿಲ್ಲ,ಈ ಹೋಬಳಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕಲ್ಪಿಸುವ ಸದುದ್ದೇಶದಿಂದ ಜಿಟಟಿಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮೋರಾರ್ಜಿ ದೇಸಾಯಿ ವಸತಿ ಶಾಲೆ , ಇದೇ ಶಾಲೆಯಲ್ಲಿ ಪಪೂ ವಿಜ್ಞಾನ ಕಾಲೇಜು ಪ್ರಾರಂಭಿಸಿ ಮೇಲ್ದರ್ಜೆಗೆ ಏರಿಸಿದ್ದು, ಮಕ್ಕಳು ಇದರ ಸದುಪಯೋಗ ಪಡಿಸಿಕೊಂಡು ಉನ್ನತ ಶಿಕ್ಷಣ ಕಲಿತು ಹೆತ್ತವರಿಗೆ ಹಾಗೂ ಗುರು ಹಿರಿಯರಿಗೆ ಗೌರವ ತರಬೇಕು ಎಂದು ಕರೆ ನೀಡಿದರು.
ನಮ್ಮ ತಾಲೂಕು ಪ್ರತಿ ವರ್ಷ ಬರಗಾಲಕ್ಕೆ ತುತ್ತಾಗಿ ರೈತರನ್ನು ,ಕೂಲಿಕಾರ್ಮಿರನ್ನು ಸಾಲದ ಸುಳಿಗೆ ನೂಕಲ್ಪಡುತ್ತಿದೆ. ಆದರೂ ಮಾಜಿ ಸಿಎಂ ಸಿದ್ದರಾಮಯ್ಯ ಜಾರಿ ಮಾಡಿದ ಅನ್ನಭಾಗ್ಯ ಯೋಜನೆ ವರದಾನ. ನಮ್ಮ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬರ ನಿರ್ವಹಣೆ ಮಾಡಲು ಸರ್ಕಾರ ಸನ್ನದ್ಧವಾಗಿದೆ. ಯಾರು ಸಹ ಅಪಪ್ರಚಾರಗಳಿಗೆ ಕಿವಿಗೊಡ ಬೇಡಿ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.