ಲಕ್ಷ್ಮೇಶ್ವರ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಮತದಾರರು ಕಾಂಗ್ರೆಸ್ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸದಿಂದ ನಾನು ಗೆಲುವು ಸಾಧಿಸುತ್ತೇನೆ ಎನ್ನುವ ವಿಶ್ವಾಸವಿದೆ ಎಂದು ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದ್ದೇವರಮಠ ಹೇಳಿದರು.
ಜನರು ಕಾಂಗ್ರೆಸ್ ಮೇಲೆ ತೋರುತ್ತಿರುವ ಪ್ರೀತಿ, ವಿಶ್ವಾಸ ಹಾಗೂ ಬೆಂಬಲ ಕಂಡು ನನಗೆ ಗೆಲುವಿನ ವಿಶ್ವಾಸ ಮೂಡಿದೆ.ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಜನರು ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿವೆ. ಮಹಿಳೆಯರು ಕಾಂಗ್ರೆಸ್ ಪಕ್ಷವು ಕೊಡ ಮಾಡಿರುವ ಗ್ಯಾರಂಟಿಗಳಿಂದ ಕುಟುಂಬದ ಸಮಸ್ಯೆ ಬಗೆಹರಿಸಲು ಸಾಧ್ಯವಾದ ಬಗ್ಗೆ ಮಾಹಿತಿ ನೀಡಿದ್ದಾರೆ.