ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಮತಯಾಚನೆ

KannadaprabhaNewsNetwork | Published : May 28, 2024 1:07 AM

ಸಾರಾಂಶ

ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಕೆ. ಮಂಜುನಾಥ್‌ ಕುಮಾರ್‌ ಮತ್ತು ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಯನೂರ್‌ ಮಂಜುನಾಥ್‌ ಪರವಾಗಿ ಕಾಂಗ್ರೆಸ್‌ ಮುಖಂಡರು ಮತಯಾಚನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ಹಾಗೂ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಯನೂರು ಮಂಜುನಾಥ್ ಪರವಾಗಿ ಮಡಿಕೇರಿಯಲ್ಲಿ ಕಾಂಗ್ರೆಸ್ ಮುಖಂಡರು ಮತಯಾಚನೆ ನಡೆಸಿದರು.

ಕೊಡಗು ಜಿಲ್ಲಾ ಮುಖ್ಯೋಪಾಧ್ಯಾಯರ ಸಭೆ ಸಂತ ಮೈಕಲರ ಶಾಲಾ ಸಭಾಂಗಣದಲ್ಲಿ ನಡೆಯುವ ಮಾಹಿತಿ ಪಡೆದ ಮಡಿಕೇರಿ ನಗರ ಕಾಂಗ್ರೆಸ್ ಮುಖಂಡರ ತಂಡ ಮಾಜಿ ಮೂಡಾ ಅಧ್ಯಕ್ಷರ ಚುಮ್ಮಿ ದೇವಯ್ಯ ಮತ್ತು ಪ್ರಮುಖರ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದರು.

ಈ ಸಂದರ್ಭ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಅವರು ಶಿಕ್ಷಕರ ಕ್ಷೇತ್ರದಿಂದ ಸ್ವತಃ ಶಿಕ್ಷಕರಾದ ಕೆ.ಕೆ.ಮಂಜುನಾಥ್ ಅವರು ಅಭ್ಯರ್ಥಿ ಆಗಿರುವುದರಿಂದ ಮತದಾರರು ಹೆಚ್ಚಿನ ಒಲವು ತೋರುತ್ತಿದ್ದು ಶಿಕ್ಷಕರ ಸಮಸ್ಯೆ ನಿವಾರಣೆಗೆ ಕೆ.ಕೆ.ಮಂಜುನಾಥ್ ಆಯ್ಕೆ ಅನಿವಾರ್ಯ ಎಂದು ತೀರ್ಮಾನಕ್ಕೆ ಬಂದಿದ್ದಾರೆ. ಹಾಗೆ ರಾಜ್ಯ ಮಟ್ಟದ ಮುಖಂಡರಾದ ಅಯನೂರು ಮಂಜುನಾಥ್ ಅವರು ಉತ್ತಮ ಆಡಳಿತಗಾರರು ಎಂದು ಖ್ಯಾತರಾಗಿರುವುದರಿಂದ ಕಾಂಗ್ರೆಸ್ ನ ಇಬ್ಬರು ಅಭ್ಯರ್ಥಿಗಳಿಗೆ ಜಿಲ್ಲೆಯಲ್ಲಿ ಹೆಚ್ಚಿನ ಮತ ಲಭ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ನಗರ ಸಭಾ ಸದಸ್ಯರಾದ ಪ್ರಕಾಶ್ ಆಚಾರ್ಯ, ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್ ಪಿ.ಚಂದ್ರಶೇಖರ್, ನಗರ ಸಭಾ ಸದಸ್ಯರಾದ ಮಂಡಿರ ಸದಾ ಮುದ್ದಪ್ಪ, ಜಿ.ಸಿ.ಜಗದೀಶ್, ಯಾಕುಬ್, ಪ್ರಮುಖರಾದ ಪುದಿನೆರವನ ರೇವತಿ ರಮೇಶ್, ಬಿ.ಪಿ.ಗಣೇಶ್, ಶ್ರೀಮತಿ ಶಶಿ, ಮಮ್ತಾಜ್, ರವಿಗೌಡ, ಲೀಲಾ ಶೇಷಮ್ಮ, ಕವನ್ ಕೊತ್ತೋಳಿ, ಪ್ರೇಮಾ ಲಿಂಗಪ್ಪ, ಶರಣ್, ಅರ್ಜುನ್, ರಿಯಾಜ್ ಅಹಮದ್, ಶೇಕ್ ಅಹಮದ್, ಸುಬ್ರಮಣಿ, ಅಬೀಬ್, ಫ್ರಾನ್ಸಿ ಪಾರ್ವತಿ ಸೇರಿದಂತೆ ಪ್ರಮುಖರು ಮತಯಾಚನೆಯಲ್ಲಿ ಭಾಗಿಯಾಗಿದ್ದರು.

Share this article