ವಿದ್ಯಾ ಗಣಪತಿ ಸಮಿತಿ, ಈದ್ ಮಿಲಾದ್‌ ಕಮಿಟಿ ಸೌಹಾರ್ದತೆ

KannadaprabhaNewsNetwork |  
Published : Nov 21, 2024, 01:04 AM IST
ನರಸಿಂಹರಾಜಪುರದ ಸುಂಕದಕಟ್ಟೆಯ ಶ್ರೀ ವಿದ್ಯಾ ಗಣಪತಿ ಸಮಿತಿಯವರಿಗೆ ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ಅವರು ಅಭಿನಂದನಾ ಪತ್ರ ವಿತರಿಸಿದರು. ಸುಂಕದಕಟ್ಟೆ ವಿದ್ಯಾ ಗಣಪತಿ ಸಮಿತಿ ಅಧ್ಯಕ್ಷ ನವೀನ್ ಹಾಗೂ ಸದಸ್ಯರಿದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರ: ಪಟ್ಟಣದ ಸುಂಕದಕಟ್ಟೆ ವಿದ್ಯಾ ಗಣಪತಿ ಸಮಿತಿ ಹಾಗೂ ಜಾಮೀಯಾ ಮಸೀದಿಯ ಈದ್ ಮಿಲಾದ್‌ ಕಮಿಟಿಯವರು ಕಾನೂನನ್ನು ಗೌರವಿಸಿ ಇತರರಿಗೆ ಮಾದರಿಯಾಗಿರುವುದನ್ನು ಗುರುತಿಸಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಅವರನ್ನು ಸನ್ಮಾನಿಸಿ, ಅಭಿನಂದನೆ ಪತ್ರ ನೀಡಿದ್ದಾರೆ ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು.

ನರಸಿಂಹರಾಜಪುರ: ಪಟ್ಟಣದ ಸುಂಕದಕಟ್ಟೆ ವಿದ್ಯಾ ಗಣಪತಿ ಸಮಿತಿ ಹಾಗೂ ಜಾಮೀಯಾ ಮಸೀದಿಯ ಈದ್ ಮಿಲಾದ್‌ ಕಮಿಟಿಯವರು ಕಾನೂನನ್ನು ಗೌರವಿಸಿ ಇತರರಿಗೆ ಮಾದರಿಯಾಗಿರುವುದನ್ನು ಗುರುತಿಸಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಅವರನ್ನು ಸನ್ಮಾನಿಸಿ, ಅಭಿನಂದನೆ ಪತ್ರ ನೀಡಿದ್ದಾರೆ ಎಂದು ಪೊಲೀಸ್ ಠಾಣಾಧಿಕಾರಿ ನಿರಂಜನಗೌಡ ತಿಳಿಸಿದರು.

ಅವರು ಸೋಮವಾರ ಪೊಲೀಸ್‌ ಠಾಣೆಯಲ್ಲಿ ಸುಂಕದಕಟ್ಟೆ ವಿದ್ಯಾಗಣಪತಿ ಸಮಿತಿ ಅಧ್ಯಕ್ಷ ನವೀನ್ ಮತ್ತು ಸದಸ್ಯರಿಗೆ ಹಾಗೂ ಜಾಮಿಯಾ ಮಸೀದಿಯ ಈದ್ ಮಿಲಾದ್‌ ಕಮಿಟಿ ಅಧ್ಯಕ್ಷ ನಾಸೀರ್‌ ಖಾನ್‌ ಹಾಗೂ ಸದಸ್ಯರಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ನೀಡಿದ ಅಭಿನಂದನೆ ಪತ್ರವನ್ನು ವಿತರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಗಣಪತಿ ಹಬ್ಬ ಹಾಗೂ ಈದ್‌ ಮಿಲಾದ್‌ ಹಬ್ಬದ ಸಮಯದಲ್ಲಿ ಪೊಲೀಸ್‌ ಇಲಾಖೆಯು ನೀಡಿದ ಸೂಚನೆಯನ್ನು ಸರಿಯಾಗಿ ಅನುಸರಿಸಿ ಯಾವುದೇ ಕಾನೂನು ಉಲ್ಲಂಘನೆಯಾಗದಂತೆ ಹಬ್ಬವನ್ನು ಸರಿಯಾದ ರೀತಿಯಲ್ಲಿ ಆಚರಿಸಿದ 9 ಸಮಿತಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಕಾರಿ ಡಾ. ವಿಕ್ರಂ ಅಮಟೆ ಪೊಲೀಸ್‌ ಇಲಾಖೆ ಹಾಗೂ ವೈಯ್ಯಕ್ತಿಕವಾಗಿಯೂ ಸನ್ಮಾನಿಸಿ ಅಭಿನಂದಿಸಿದ್ದಾರೆ.

ವಿಶೇಷವಾಗಿ ಜಿಲ್ಲೆಯ 9 ಸಮಿತಿಗಳ ಪೈಕಿ ನರಸಿಂಹರಾಜಪುರ ಪಟ್ಟಣದ ಗಣಪತಿ ಸಮಿತಿ ಹಾಗೂ ಈದ್ ಮಿಲಾದ್‌ ಸಮಿತಿಗೆ ಅಭಿನಂದನಾ ಪತ್ರ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಕಾನೂನು ಗೌರವಿಸಿ ಶಾಂತಿ ಕಾಪಾಡಬೇಕು ಎಂಬ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಇದೇ ಮೊದಲ ಬಾರಿಗೆ 9 ಸಮಿತಿಗಳನ್ನು ಗುರುತಿಸಿ ಸನ್ಮಾನ ಮಾಡಿ ಅಭಿನಂದನೆ ಪತ್ರ ನೀಡಿದ್ದಾರೆ ಎಂದು ಅವರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ