ಕೊಡಗು ವಿದ್ಯಾಲಯದಲ್ಲಿ ವಿದ್ಯಾರಂಭ ಕಾರ್ಯಕ್ರಮ

KannadaprabhaNewsNetwork |  
Published : Jun 10, 2025, 02:53 AM IST
ಚಿತ್ರ :  7ಎಂಡಿಕೆ7 : ಕೊಡಗು ವಿದ್ಯಾಲಯದಲ್ಲಿ ವಿದ್ಯಾರಂಭ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ನಗರದ ಕೊಡಗು ವಿದ್ಯಾಲಯದಲ್ಲಿ ವಿದ್ಯಾರಂಭ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಲೆಯ ಪ್ರಾಂಶುಪಾಲರಾದ ಕೆ.ಎಸ್‌. ಸುಮಿತ್ರಾ ಮಾತನಾಡಿದರು.

ಮಡಿಕೇರಿ: ನಗರದ ಕೊಡಗು ವಿದ್ಯಾಲಯದಲ್ಲಿ ವಿದ್ಯಾರಂಭ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನೂತನ ಶೈಕ್ಷಣಿಕ ವರ್ಷಕ್ಕೆ ಉತ್ಸಾಹಭರಿತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಪ್ರಾಂಶುಪಾಲರು ಕಾರ್ಯನಿರ್ವಹಣಾಧಿಕಾರಿ ಶಿಕ್ಷಕವೃಂದ ಹಾಗೂ ಪಾಲಕರ ಸಮ್ಮುಖದಲ್ಲಿ ದೀಪಪ್ರಜ್ವಲನೆಯ ಮೂಲಕ ನೆರವೇರಿಸಿದರು.

ಶಾಲೆಯ ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ ಮಾತನಾಡಿ, ವಿದ್ಯಾರ್ಥಿಗಳು ಅತ್ಯಧಿಕ ಮೊಬೈಲ್ ಫೋನ್ ಬಳಕೆ ಮಾಡದಂತೆ ಎಚ್ಚರ ವಹಿಸಿ ಎಂದು ತಿಳಿಸಿದರು. ಮೊಬೈಲ್ ಮಕ್ಕಳ ಶಾರೀರಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ತೊಂದರೆ ಉಂಟು ಮಾಡುತ್ತದೆ. ವಿದ್ಯಾರ್ಥಿಗಳು ಪುಸ್ತಕಪಠನ, ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಬೇಕು ಎಂದು ಅವರು ಕಿವಿಮಾತು ಹೇಳಿದರು.

ಶಾಲಾ ಶೈಕ್ಷಣಿಕ ಸಂಯೋಜಕಿ ಭಾರತಿ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿದರು. ಕೊಡಗು ವಿದ್ಯಾಲಯ ಶಿಕ್ಷಕ ವೃಂದದವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. ಶಿಕ್ಷಕಿ ಶೃತಿ ಬಿ. ಎಂ ಕಾರ್ಯಕ್ರಮ ವನ್ನು ನಿರೂಪಿಸಿ , ನಳಿನಿ ಕಿರಣ್ ವಂದಿಸಿದ ಕಾರ್ಯಕ್ರಮದಲ್ಲಿ ಪೋಷಕವೃಂದ , ಶಿಕ್ಷಕ ವೃಂದ ದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೋಟಗಾರಿಕೆ ವಿವಿಯಲ್ಲಿ ರೈತ ಸಂಪರ್ಕ ಕೇಂದ್ರ ಸ್ಥಾಪಿಸಿ
ದೈವಾರಾಧನೆ ಬಗ್ಗೆ ಮಾತಿನಲ್ಲಿ ಎಚ್ಚರ ಇರಲಿ: ಸುರೇಶ್‌ ನಾವೂರು