ಎಚ್ಚೆತ್ತ ಆಡಳಿತ ವರ್ಗ: ಟ್ಯಾಂಕರ್ ಮೂಲಕ ನೀರು ಸರಬರಾಜು

KannadaprabhaNewsNetwork |  
Published : Jun 08, 2024, 12:33 AM IST
07ಕೆಪಿಕೆವಿಟಿ01:  | Kannada Prabha

ಸಾರಾಂಶ

ಕವಿತಾಳ ಪಟ್ಟಣದಲ್ಲಿ ಕಲುಷಿತ ನೀರು ಪೂರೈಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೆ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಕವಿತಾಳ

ಪಟ್ಟಣದಲ್ಲಿ ಕಲುಷಿತ ನೀರು ಪೂರೈಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೆ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಮುಂದಾಗಿದ್ದಾರೆ.

ಇಲ್ಲಿನ 16 ವಾರ್ಡ್‌ಗಳಿಗೆ ಕುಡಿಯುವ ನೀರು ಪೂರೈಸುವ ಸಮೀಪದ 73 ಕ್ಯಾಂಪ್ ಹತ್ತಿರದ ಕೆರೆಯಲ್ಲಿ ನೀರು ಸಂಪೂರ್ಣ ಖಾಲಿಯಾಗಿದ್ದು, ತಳಮಟ್ಟದ ಕಲುಷಿತ ನೀರು ಪೂರೈಕೆ ಮಾಡಲಾಗಿತ್ತು. ನೀರು ದುರ್ವಾಸನೆ ಬೀರುತ್ತಿದೆ ರೋಗ ಹರಡುವ ಭೀತಿ ಉಂಟಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದರು.

ಗುರುವಾರ ಕೆರೆ ಮತ್ತು ಕೆಲವು ವಾರ್ಡ್‌ಗಳಿಗೆ ಭೇಟಿ ನೀಡಿದ್ದ ಜಿಪಂ ಯೋಜನಾ ನಿರ್ದೇಶಕ ಜಗದೀಶ ಗಂಗಣ್ಣನವರ್ 24 ಗಂಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸವುದಾಗಿ ಭರವಸೆ ನೀಡಿದ್ದರು, ಆದಾಗ್ಯೂ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದ್ದರು. ಶುಕ್ರವಾರ ಬೆಳಗ್ಗೆ ಜಿಲ್ಲಾ ಪಂಚಾಯಿತಿ ವಾಹನ ಬಂದಿದ್ದು ಅದರಲ್ಲಿ ಕೊಳವೆಬಾವಿ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್ ಬರುತ್ತಿದ್ದಂತೆ ಖಾಲಿ ಕೊಡ ಹಿಡಿದ ಜನರು ನೀರಿಗಾಗಿ ಮುಗಿಬಿದ್ದ ದೃಶ್ಯ ಕಂಡು ಬಂತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ
ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!