ಲಕ್ಷ್ಮೇಶ್ವರ: ಪಟ್ಟಣದ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 19ನೇ ವಾರ್ಡನ ಸದಸ್ಯ ವಿಜಯ ಕರಡಿ ಅವಿರೋಧವಾಗಿ ಆಯ್ಕೆಯಾದರು.
ಸ್ಥಾಯಿ ಸಮಿತಿಯ ೧೧ ಸದಸ್ಯರಲ್ಲಿ ಮೂವರು ಸದಸ್ಯರು ಗೈರು ಹಾಜರಾಗಿದ್ದರು. ಉಳಿದ ೮ ಜನರು ಹಾಜರ ಇದ್ದುದ್ದರಿಂದ ಕೋರಂ ಭರ್ತಿಯ ಹಿನ್ನೆಲೆಯಲ್ಲಿ ಈ ಆಯ್ಕೆ ಪ್ರಕ್ರೀಯೆ ನಡೆಸಲಾಯಿತು. ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯ ಕರಡಿ ಅವರನ್ನು ಸದಸ್ಯರು ಮತ್ತು ಸಿಬ್ಬಂದಿಗಳು ಅಭಿನಂದಿಸಿದರು. ಈ ವೇಳೆ ಮಾತನಾಡಿದ ಅವರು ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು, ಊರಿನ ಹಿರಿಯರು, ಮುಖಂಡರು ಸೇರಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡಿರುವದು ನನಗೆ ದೊರೆತ ಭಾಗ್ಯವಾಗಿದೆ. ದೊರೆತ ಅವಧಿಯಲ್ಲಿ ಎಲ್ಲರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸ ಹೊಂದಿದ್ದು, ಪಟ್ಟಣದ ಅಭಿವೃದ್ಧಿ ವಿಷಯದಲ್ಲಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.ಸಭೆಯಲ್ಲಿ ಪುರಸಭೆ ಉಪಾಧ್ಯಕ್ಷ ಪೀರದೋಷ ಆಡೂರ, ಸ್ಥಾಯಿ ಸಮಿತಿ ಸದಸ್ಯ ರಾಜೀವ ಕುಂಬಿ, ಜಯಕ್ಕ ಕಳ್ಳಿ, ಬಸವರಾಜ ಓದುನವರ, ಪ್ರವೀಣ ಬಾಳಿಕಾಯಿ, ರಾಮಪ್ಪ ಗಡದವರ, ಸಿಕಂದರಭಾಷಾ ಕಣಕೆ, ಮಂಜವ್ವ ದುರಗಣ್ಣವರ, ನಾಮನಿರ್ದೇಶಿತ ಸದಸ್ಯ ಪ್ರಕಾಶ ಕೊಂಚಿಗೇರಿಮಠ, ಮುಖ್ಯಾಧಿಕಾರಿ ಮಹೇಶ ಹಡಪದ ಹಾಗೂ ಸಿಬ್ಬಂದಿಗಳು ಹಾಜರಿದ್ದರು.