- ಗಮನ ಸೆಳೆದ ಸ್ತಬ್ಧಚಿತ್ರ ಮೆರವಣಿಗೆ । ಎಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್ । ಮುಸ್ಲಿಂ ಸಮಾಜದಿಂದ ಸನ್ಮಾನ, ಹಬ್ಬಕ್ಕೆ ಶುಭ ಹಾರೈಕೆ
ದಸರಾ ಹಬ್ಬ ಅಂಗವಾಗಿ ಪ್ರತಿ ವರ್ಷದಂತೆ ವಿಶ್ವ ಹಿಂದು ಪರಿಷತ್ತು, ಸಾರ್ವಜನಿಕ ವಿಜಯ ದಶಮಿ ಮಹೋತ್ಸವ ಸಮಿತಿಯಿಂದ ನಗರದಲ್ಲಿ ಶನಿವಾರ 43ನೇ ವರ್ಷದ ಬೃಹತ್ ಶೋಭಯಾತ್ರೆ ಅದ್ಧೂರಿಯಾಗಿ ನಡೆಯಿತು.
ಬೇತೂರು ರಸ್ತೆಯ ಶ್ರೀ ವೆಂಕಟೇಶ್ವರ ವೃತ್ತದಿಂದ ಜಡೆ ಸಿದ್ದೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಬೃಹತ್ ಶೋಭಯಾತ್ರೆಗೆ ಚಾಲನೆ ನೀಡಿ, ಸಮಸ್ತರಿಗೂ ವಿಜಯ ದಶಮಿ ಹಬ್ಬದ ಶುಭ ಹಾರೈಸಿದರು. ಶ್ರೀ ಚಾಮುಂಡೇಶ್ವರಿ ಪುತ್ಥಳಿಯ ಟ್ರ್ಯಾಕ್ಟರ್ ಅನ್ನು ಬಿಜೆಪಿ ಹಿರಿಯ ಮುಖಂಡ, ಪಾಲಿಕೆ ಮಾಜಿ ಸದಸ್ಯ ಸಂಕೋಳ್ ಚಂದ್ರಶೇಖರ ಚಾಲನೆ ಮಾಡಿದರು.ಜಾನಪದ ಕಲಾ ತಂಡಗಳು- ಸ್ತಬ್ಧಚಿತ್ರಗಳು:
ಡಿಜೆ ಸೌಂಡ್ಸ್ಗಾಗಿ ಯುವಜನರ ಪಟ್ಟು:
ಮೇಯರ್ ಕೆ.ಚಮನ್ ಸಾಬ್, ತಂಜೀಮುಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್ ಅಧ್ಯಕ್ಷ ದಾದು ಸೇಟ್, ಟಿ.ಅಸ್ಗರ್ ಸೇರಿದಂತೆ ಮುಸ್ಲಿಂ ಸಮಾಜದ ಮುಖಂಡರು ಶೋಭಾಯಾತ್ರೆಯಲ್ಲಿದ್ದ ಹಿಂದು ಸಮಾಜದ ಮುಖಂಡರು, ಸಮಾಜ ಬಾಂಧವರು, ಮುಖಂಡರಿಗೆ ವಿಜಯದಶಮಿ ಶುಭ ಕೋರಿ, ಹೂವಿನ ಮಾಲೆ, ಶಾಲು ಹಾಕಿ ಸನ್ಮಾನಿಸಿದರು. ಪರಸ್ಪರರಿಗೆ ಸಿಹಿ ತಿನ್ನಿಸುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾದರು.
ಉತ್ಸವ ಹಿನ್ನೆಲೆ ಎಲ್ಲ ಕಡೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.ಗಣೇಶ ಮೆರವಣಿಗೆ ವೇಳೆಯ ಕಹಿ ಘಟನೆ ಹಿನ್ನೆಲೆ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮೈಯೆಲ್ಲಾ ಕಣ್ಣಾಗಿಸಿಕೊಂಡು ಬಂದೋಬಸ್ತ್ ಮಾಡಿದ್ದರು. ವಿಶೇಷವಾಗಿ ಡ್ರೋಣ್ ಕಣ್ಗಾವಲು ಹಾಕಲಾಗಿತ್ತು. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ವಿಪ ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿಸ್ವಾಮಿ, ಕೆ.ಬಿ. ಶಂಕರ ನಾರಾಯಣ, ಮಾಜಿ ಮೇಯರ್ಗಳಾದ ಎಸ್.ಟಿ.ವೀರೇಶ, ಬಿ.ಜಿ. ಅಜಯಕುಮಾರ, ಮಾಡಾಳ ಮಲ್ಲಿಕಾರ್ಜುನ, ಚಂದ್ರಶೇಖರ ಪೂಜಾರ, ದೂಡಾ ಮಾಜಿ ಅಧ್ಯಕ್ಷರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಟಿ.ಶ್ರೀನಿವಾಸ ದಾಸಕರಿಯಪ್ಪ, ಮಲ್ಲಿಕಾರ್ಜುನ, ಹರೀಶ ಪವಾರ, ಆರ್.ಎಲ್.ಶಿವಪ್ರಕಾಶ, ಕೆ.ಪ್ರಸನ್ನಕುಮಾರ, ಆರ್.ಶಿವಾನಂದ, ತಿಪ್ಪೇಸ್ವಾಮಿ, ಶಂಭುಲಿಂಗಪ್ಪ, ರಾಜು, ಚೇತನ ಶಿವಕುಮಾರ, ಎಚ್.ಬಿ.ಮಂಜುನಾಥ, ಧನಂಜಯ ಕಡ್ಲೇಬಾಳು, ವಿನಾಯಕ ರಾನಡೆ, ಶಿವನಗೌಡ ಪಾಟೀಲ, ಶಂಕರಗೌಡ ಬಿರಾದಾರ, ಗುರು ಸೋಗಿ, ಟಿಂಕರ್ ಮಂಜಣ್ಣ, ಅನೇಕರು ಇತರರು ಇದ್ದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ.ಸಂತೋಷ, ಜಿ. ಮಂಜುನಾಥ, ಎಎಸ್ಪಿ ಸ್ಯಾಮ್ ವರ್ಗಿಸ್, ಡಿವೈಎಸ್ಪಿ ಮಲ್ಲೇಶ ದೊಡ್ಮನಿ, ಪೊಲೀಸ್ ಅಧಿಕಾರಿ ಸಿಬ್ಬಂದಿ ಇದ್ದರು.
- - --(ಫೋಟೋ ಬರಲಿವೆ):