ವಿಜಯದಶಮಿ; ಚಾಮುಂಡಿ ದೇವಿಗೆ ಸಚಿವರಿಂದ ವಿಶೇಷ ಪೂಜೆ

KannadaprabhaNewsNetwork |  
Published : Oct 03, 2025, 01:07 AM IST
್ಿ್ಿ್ಿ್ಿ್ಿ್ಿಿ | Kannada Prabha

ಸಾರಾಂಶ

ನವರಾತ್ರಿ ಪ್ರಯುಕ್ತ ಶ್ರೀ ಚಾಮುಂಡೇಶ್ವರಿಗೆ ವಿಶೇಷವಾಗಿ ಅಲಂಕಾರಿಸಲಾಗಿತ್ತು. ದಸರಾ ಉತ್ಸವದ 11ನೇ ದಿನವಾದ ಗುರುವಾರ ಏರ್ಪಡಿಸಿದ್ದ ಶ್ರೀ ಚಂಡಿಕಾ ಹೋಮದಲ್ಲಿ ಸಚಿವರು ಪಾಲ್ಗೊಂಡು ಜಿಲ್ಲೆಯ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿ ಹೋಮ ಕುಂಡಕ್ಕೆ ಪೂರ್ಣಾಹುತಿ ಅರ್ಪಿಸಿದರು.

ತುಮಕೂರು: ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನವರಾತ್ರಿ ಪ್ರಯುಕ್ತ ಶ್ರೀ ಚಾಮುಂಡೇಶ್ವರಿಗೆ ವಿಶೇಷವಾಗಿ ಅಲಂಕಾರಿಸಲಾಗಿತ್ತು. ದಸರಾ ಉತ್ಸವದ 11ನೇ ದಿನವಾದ ಗುರುವಾರ ಏರ್ಪಡಿಸಿದ್ದ ಶ್ರೀ ಚಂಡಿಕಾ ಹೋಮದಲ್ಲಿ ಸಚಿವರು ಪಾಲ್ಗೊಂಡು ಜಿಲ್ಲೆಯ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿ ಹೋಮ ಕುಂಡಕ್ಕೆ ಪೂರ್ಣಾಹುತಿ ಅರ್ಪಿಸಿದರು. ನಂತರ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸೇರಿದಂತೆ ಭಕ್ತ ಸಮೂಹ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ