ಎಸ್ಸೆಸ್ಸೆಲ್ಸಿಯಲ್ಲಿ ವಿಜಯಪುರಕ್ಕೆ ಭರ್ಜರಿ ಫಲಿತಾಂಶ

KannadaprabhaNewsNetwork |  
Published : Apr 24, 2026, 03:30 AM IST
ಕಾಂಗ್ರೆಸ್ ಮುಖಂಡ ಎಸ್.ಎಂ. ಪಾಟೀಲ ಗಣಿಹಾರ ಪತ್ರಿಕಾಗೋಷ್ಠಿ | Kannada Prabha

ಸಾರಾಂಶ

ವಿಜಯಪುರ : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಶೇ.94.16 ರಷ್ಟಾಗಿದೆ. ಜಿಲ್ಲೆ, ಈ ಬಾರಿ ರಾಜ್ಯ ಮಟ್ಟದ ಫಲಿತಾಂಶದಲ್ಲಿ ಗಣನೀಯ ಸುಧಾರಣೆ ಕಂಡಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಶೇ.94.16 ರಷ್ಟಾಗಿದೆ. ಜಿಲ್ಲೆ, ಈ ಬಾರಿ ರಾಜ್ಯ ಮಟ್ಟದ ಫಲಿತಾಂಶದಲ್ಲಿ ಗಣನೀಯ ಸುಧಾರಣೆ ಕಂಡಿದೆ. ಈ ಬಾರಿ ಜಿಲ್ಲೆಯ ಫಲಿತಾಂಶ ಶೇ.94.16 ರಷ್ಟಾಗುವ ಮೂಲಕ ಉತ್ತಮ ಸಾಧನೆ ಮಾಡಿರುವುದು ಶಿಕ್ಷಣ ಪ್ರೇಮಿಗಳಲ್ಲಿ ಸಂತಸ ಮೂಡಿಸಿದೆ. ಈ ಮೂಲಕ ರಾಜ್ಯದ ಜಿಲ್ಲಾವಾರು ಫಲಿತಾಂಶ ಪಟ್ಟಿಯಲ್ಲಿ ವಿಜಯಪುರ ಜಿಲ್ಲೆಗೆ 22ನೇ ಸ್ಥಾನ ದೊರೆತಿದೆ. 2024-25ನೇ ಸಾಲಿನಲ್ಲಿ ಶೇ.78.85 ಫಲಿತಾಂಶ ಮಾಡುವ ಮೂಲಕ ರಾಜ್ಯದ ಪಟ್ಟಿಯಲ್ಲಿ 34ನೇ ಸ್ಥಾನಕ್ಕೆ ಏರಿತ್ತು. ಈ ಬಾರಿ 12 ಸ್ಥಾನಗಳ ಮೂಲಕ ಮೇಲೇರುವ ಮೂಲಕ 22ನೇ ಸ್ಥಾನಕ್ಕೆ ಬಂತು ನಿಂತಿದೆ. ಈ ಮೂಲಕ ಕಳೆದ ಬಾರಿಗಿಂತ ಶೇ.15.31ರಷ್ಟು ಹೆಚ್ಚು ಫಲಿತಾಂಶ ಸುಧಾರಣೆ ಕಂಡಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 38423 ಮಕ್ಕಳ ಪೈಕಿ 36,180 ಮಕ್ಕಳು ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದಾರೆ. ಈ ವರ್ಷದ ಫಲಿತಾಂಶದಲ್ಲಿ ಗಣನೀಯವಾಗಿ ಹೆಚ್ಚಳ ಕಂಡಿದೆ.ಜಿಲ್ಲೆಗೆ ಒಲಿದ ಮೊದಲ ರ್‍ಯಾಂಕ್‌:

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸೌಜನ್ಯಾ ಬಸವರಾಜ ಕಂದಕೂರ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ. ರಾಜ್ಯದಲ್ಲಿ ಒಟ್ಟು 7 ಮಕ್ಕಳು ಟಾಪರ್‌ ಆಗಿದ್ದು, ಈ ಪೈಕಿ ಸೌಜನ್ಯ ಕೂಡ ಒಬ್ಬಳಾಗಿದ್ದಾಳೆ. ಈ ಮೂಲಕ ರಾಜ್ಯ ಹಾಗೂ ಮತ್ತು ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೆಶಕ ವೀರಯ್ಯ ಸಾಲಿಮಠ ತಿಳಿಸಿದ್ದಾರೆ.

ನಾಗರಬೆಟ್ಟದ ಪಾಟೀಲ ಕನ್ನಡ ಮಾಧ್ಯಮ ಪ್ರೌಢಶಾಲೆಯ ನೇಹಾ ಗುರಡ್ಡಿ 624 ಅಂಕ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದರೆ, ನಾಗರಬೆಟ್ಟದ ಎಸ್‌ಡಿಕೆ ಪ್ರೌಢಶಾಲೆಯ ಪೂಜಾ ಲಮಾಣಿ ಕನ್ನಡ ಮಾಧ್ಯಮದಲ್ಲಿ ಶೇ.99.84 ಅಂಕ ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಆಕ್ಸಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜ್ಯೋತ್ಸ್ನಾ ಪಾಟೀಲ ಶೇ.99.68 ಅಂಕ ಪಡೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. ಇವರೊಟ್ಟಿಗೆ ಮುದ್ದೇಬಿಹಾಳ ತಾಲೂಕಿನ ಮೈಲೇಶ್ವರ ಗ್ರಾಮದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗಂಗಮ್ಮ ಕೋಳೂರ ಶೇ.99.68 ಹಾಗೂ ಜಿಲ್ಲೆಯ ಬೇಳೂರು ಕ್ರಾಸ್ ಜೆಎಸ್‌ಎಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸುಪರ್ಣಿಕಾ ಪಾಟೀಲ ಶೇ. 99.68 ಅಂಕ ಪಡೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಡಿಡಿಪಿಐ ವೀರಯ್ಯ ಸಾಲಿಮಠ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನವಜಾತ ಶಿಶು ಕತ್ತು ಕುಯ್ದುಟಾಯ್ಲೆಟ್‌ಗೆ ಎಸೆದ ತಾಯಿ
ಸಾಲಗಾರರ ಕಾಟ: 17 ನೇಮಹಡಿಯಿಂದ ಹಾರಿ ಆತ್ಮಹತ್ಯೆ