ಅಕ್ಟೋಬರ್‌ 15ರಂದು ಬಂಟ್ವಾಳದಲ್ಲಿ ಜಿಲ್ಲಾ ಬಿಜೆಪಿ ಸಮಾವೇಶ, ವಿಜಯೇಂದ್ರ ಭಾಗಿ

KannadaprabhaNewsNetwork |  
Published : Oct 11, 2024, 11:56 PM IST
ಸತೀಶ್ ಕುಂಪಲ ಸುದ್ದಿಗೋಷ್ಠಿ | Kannada Prabha

ಸಾರಾಂಶ

ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸೇರಿದಂತೆ ರಾಜ್ಯ ಮಟ್ಟದ ನಾಯಕರೂ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಕಾರಣ ತೆರವಾದ ವಿಧಾನ ಪರಿಷತ್‌ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಸಲುವಾಗಿ ಅ.15ರಂದು ಬಂಟ್ವಾಳದ ಬಂಟರ ಭವನದಲ್ಲಿ ದ.ಕ. ಜಿಲ್ಲಾ ಮಟ್ಟದ ಬಿಜೆಪಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸೇರಿದಂತೆ ರಾಜ್ಯ ಮಟ್ಟದ ನಾಯಕರೂ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದರು.

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸುಮಾರು 6,040 ಮಂದಿ ಮತದಾರರಿದ್ದು, ಬಿಜೆಪಿ ಸಂಘಟನಾತ್ಮಕವಾಗಿ ಕೆಲಸ ಮಾಡುತ್ತಿದೆ ಎಂದರು.

ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಮಾತನಾಡಿ, ಕಾಂಗ್ರೆಸ್‌ ಶಾಸಕ ಕೋಳಿವಾಡ ಕೂಡ ಸಿದ್ದರಾಮಯ್ಯರ ಮೂಡಾ ಹಗರಣದ ಎಫೆಕ್ಟ್‌ ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಕಾರಣ ಎಂದಿದ್ದಾರೆ. ಈ ಉಪ ಚುನಾವಣೆ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌, ಪರಿಷತ್‌ ಮಾಜಿ ಸದಸ್ಯ, ಚುನಾವಣಾ ಉಸ್ತುವಾರಿ ಕ್ಯಾ.ಗಣೇಶ್ ಕಾರ್ಣಿಕ್‌, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ವಿಕಾಸ್‌ ಪುತ್ತೂರು, ಯತೀಶ್‌ ಆರ್ವಾರ್‌, ರಾಕೇಶ್‌ ರೈ ಕಡೆಂಜಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡಿಗರ ಆಕ್ರೋಶ : ರೈಲ್ವೆ ಪರೀಕ್ಷೆ ಮುಂದಕ್ಕೆ
ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆ : ಕೇಂದ್ರ ಷರತ್ತಿನ ಅಸ್ತು