ಕನ್ನಡಪ್ರಭ ವಾರ್ತೆ ಮಂಗಳೂರು
ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬುಧವಾರ ಮಂಗಳೂರಿಗೆ ಭೇಟಿ ನೀಡಿದ ವೇಳೆ ನಗರದ ಸಿ.ವಿ.ನಾಯಕ್ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ನಾಯಕನ ಹೆಸರು ರಾಹುಲ್. ರಾಹುಲ್ ಗಾಂಧಿಗೂ ರಾಹು ಕಾಲಕ್ಕೂ ಏನೂ ವ್ಯತ್ಯಾಸ ಇಲ್ಲ. ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಿದ ಬಳಿಕ ಕಾಂಗ್ರೆಸ್ಗೆ ರಾಹು ಕಾಲ ಶುರುವಾಗಿದೆ. ಸ್ವಾತಂತ್ರ್ಯ ಬಂದ ನಂತರದ ಕಾಂಗ್ರೆಸ್ ಆಡಳಿತಕ್ಕೆ ಇತಿಶ್ರೀ ಹಾಡಿದ್ದೇ ರಾಹುಲ್ ಗಾಂಧಿ. ಇಂಡಿಯಾ ಕೂಟದ ನಾಯಕ ರಾಹುಲ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯುವ ಸಂಚು ನಡೆಸುತ್ತಿದ್ದಾರೆ. ಯಾವ ದುಷ್ಟ ಶಕ್ತಿಗೂ ಮೋದಿ ಅಧಿಕಾರವನ್ನು ತಡೆಯಲು ಸಾಧ್ಯವಿಲ್ಲ. ಪ್ರಸಕ್ತ ಅಧಿಕಾರದ ಅಮಲಿನಲ್ಲಿ ಇರುವ ಸಿಎಂ, ಡಿಸಿಎಂ ಹಾಗೂ ಕಾಂಗ್ರೆಸ್ಗೆ ರಾಜ್ಯದಲ್ಲಿ ಎಲ್ಲ 28 ಸೀಟುಗಳನ್ನು ಗೆಲ್ಲಿಸಿಕೊಡುವ ಮೂಲಕ ಬಿಜೆಪಿಯು ಮೋದಿ ಅವರ ಕೈಬಲಪಡಿಸಲಿದೆ ಎಂದರು.ರೈತರ ಹಣ ಕಿತ್ತ ಕಾಂಗ್ರೆಸ್:
ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ನ ಸುಳ್ಳು ಪ್ರಚಾರದಿಂದ ಬಿಜೆಪಿ ಸೋತಿದೆ. ಈಗ ಜನತೆಗೆ ಕಾಂಗ್ರೆಸ್ನ ಆರು ತಿಂಗಳ ಆಡಳಿತ ಏನು ಎಂಬುದು ಅರ್ಥವಾಗಿದೆ. ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ನಡೆಸಲಿದೆ ಎಂದರು.
ಸ್ಪೀಕರ್ ಸ್ಥಾನದ ಬಗ್ಗೆ ಜಾತಿ ಧರ್ಮದ ಥಳಕು ಹಾಕಿದ ಶಾಸಕ ಜಮೀರ್ ಅಹ್ಮದ್ನ್ನು ಅಸೆಂಬ್ಲಿ ಪ್ರವೇಶಿಸಲು ಬಿಡಬಾರದು. ಕಾಂಗ್ರೆಸ್ನ ದುರಾಡಳಿತ ವಿರುದ್ಧ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ವಿಜಯೇಂದ್ರ ಜತೆ ಸಾಥ್ ನೀಡಲಾಗುವುದು. ನರೇಂದ್ರ ಮೋದಿ ಅವರು ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಮೂಲಕ ಅಶ್ವಮೇಧ ಕುದುರೆ ಬಿಟ್ಟಿದ್ದಾರೆ, ಇದನ್ನು ತಾಕತ್ತಿದ್ದರೆ ಕಟ್ಟಿಹಾಕುವಂತೆ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ಗೆ ಸವಾಲೆಸೆದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ ಸ್ವಾಗತಿಸಿದರು. ಕಾರ್ಯದರ್ಶಿ ಸತೀಶ್ ಕುಂಪಲ ವಂದಿಸಿದರು. ರಾಮ್ದಾಸ್ ಬಂಟ್ವಾಳ ನಿರೂಪಿಸಿದರು.
ಸಮಾವೇಶ ಆವರಣದಲ್ಲಿ ವಿಜಯೇಂದ್ರ ಅಭಿಮಾನಿಗಳು ಸಮಾರು 250 ಕಿಲೋ ತೂಕದ ಸೇಬು ಹಣ್ಣಿನ ಹಾರವನ್ನು ಕ್ರೇನ್ ಮೂಲಕ ವಿಜಯೇಂದ್ರಗೆ ಅರ್ಪಿಸಿದರು.
ಸಮಾವೇಶ ಬಳಿಕ ವಿಜಯೇಂದ್ರ ಅವರು ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ತೆರಳಿ ಭೋಜನ ಸ್ವೀಕರಿಸಿದರು. ಅಲ್ಲಿಂದ ಮಾಜಿ ಶಾಸಕ ಯೋಗೀಶ್ ಭಟ್ ಅವರನ್ನು ಭೇಟಿ ಮಾಡಿ ಕುಶಲೋಪರಿ ನಡೆಸಿದರು. ಬೂತ್ ಸಮಿತಿ ಅಧ್ಯಕ್ಷ ಯಶವಂತ ಕುದ್ರೋಳಿ ಅವರ ಮನೆಗೂ ಭೇಟಿ ನೀಡಿ ಪಕ್ಷ ಸಂಘಟನೆ ಬಗ್ಗೆ ಮಾತನಾಡಿದರು. ರಾತ್ರಿ ಅಡ್ಯಾರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.