ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಪಟ್ಟಣದ ತಂಗಡಗಿ ರಸ್ತೆಯಲ್ಲಿನ ಡಿಸಿಸಿ ಬ್ಯಾಂಕ್ನಲ್ಲಿ ನಡೆದ ಗ್ರಾಹಕರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರ ಡಿಸಿಸಿ ಬ್ಯಾಂಕ್ ಗ್ರಾಹಕರ ಅನುಕೂಲಕ್ಕೆ ವಿಶ್ವಾರ್ಹ ಸರಳ ಸೇವೆ ನೀಡುತ್ತಿದೆ. ಇದಕ್ಕೆ ಗ್ರಾಹಕರ ಸಹಕಾರ ಹಾಗೂ ನುರಿತ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗವೇ ಮುಖ್ಯ ಕಾರಣ ಎಂದರು.
ಬ್ಯಾಂಕ್ ರೈತರಿಗೆ, ಯುವಜನತೆಗೆ, ಮಹಿಳೆಯರಿಗಾಗಿ ವೈವಿಧ್ಯಮಯ ಸೇವೆಗಳನ್ನು ನೀಡುತ್ತಿದ್ದು, ಕೇವಲ ಸಾಲ ನೀಡುವುದಲ್ಲದೇ ತರಬೇತಿ ನೀಡುತ್ತಿದೆ. ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ತೀವ್ರ ಬದಲಾವಣೆಗಳಾಗುತ್ತಿದ್ದು, ಸಿಬ್ಬಂದಿ ಹೆಚ್ಚು ಕಾರ್ಯಶೀಲವಾಗಬೇಕಿದೆ ಎಂದು ತಿಳಿಸಿದರು.ಬ್ಯಾಂಕ್ ಸಿಬ್ಬಂದಿ ಸಂಸ್ಥೆಯ ಲಾಭದ ಆಧಾರದ ಮೇಲೆ ವೇತನ ಸೌಲಭ್ಯ ಪಡೆದುಕೊಳ್ಳುವುದರಿಂದ ಸಂಸ್ಥೆ ಚೆನ್ನಾಗಿ ನಡೆಯುವ ವಾತಾವರಣ ನಿರ್ಮಿಸುವ ಜವಾಬ್ದಾರಿಯೂ ಹೊಂದಿರುತ್ತಾರೆ. ಪ್ರಾಮಾಣಿಕತೆ, ಕಳಕಳಿ ಮತ್ತು ಗ್ರಾಹಕರಿಗೆ ಸೂಕ್ತ ಸೇವೆ ನೀಡುವ ಸಂಸ್ಥೆಗಳು ಅಭಿವೃದ್ಧಿ ಹೊಂದುತ್ತವೆ. ಆದ್ದರಿಂದ ಸಹಕಾರಿ ರಂಗದ ಸಿಬ್ಬಂದಿ ತಮ್ಮ ಸಂಸ್ಥೆಗಳಲ್ಲಿ ಉತ್ತಮ ಸೇವೆ ನೀಡುವ ಬಗ್ಗೆ ಗಮನಹರಿಸಬೇಕು. ಪಡೆದ ಸಾಲವನ್ನು ಸಮಯಕ್ಕೆ ಸರಿಯಾಗಿ ಮರು ಪಾವತಿಸಿ ಬ್ಯಾಂಕಿನ ಜೊತೆ ಉತ್ತಮ ಬಾಂಧವ್ಯ ಹೊಂದಬೇಕು ಎಂದು ಹೇಳಿದರು.
ಕೋಟ್........
ಇತ್ತೀಚೆಗೆ ಎಲ್ಲ ಬ್ಯಾಂಕ್ಗಳು ಡಿಜಿಟಲೀಕರಣದಿಂದ ತ್ವರಿತ ಸೇವೆ ನೀಡುತ್ತಿದ್ದು, ಗ್ರಾಹಕರ ಅಭಿಪ್ರಾಯ ಸಂಗ್ರಹಿಸಿ ಡಿಸಿಸಿ ಬ್ಯಾಂಕ್ ಕೂಡ ರಾಷ್ಟ್ರೀಕೃತ ಬ್ಯಾಂಕ್ಗಳಂತೆ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಕಾರಣ ಗ್ರಾಹಕರ ಎಲ್ಲ ಡಿಜಿಟಲ್ ಸೌಲಭ್ಯಗಳನ್ನು ಸದುಪಯೋಗ ಪಡೆಸಿಕೊಳ್ಳುವ ಆರ್ಥಿಕ ಸುಧಾರಣೆಗೆ ಮುಂದಾಗಬೇಕು.ಎಂ.ಜಿ.ಪಾಟೀಲ, ಡಿಸಿಸಿ ಬ್ಯಾಂಕ್ ಅಭಿವೃದ್ಧಿ ಅಧಿಕಾರಿ