ಕನ್ನಡಪ್ರಭ ವಾರ್ತೆ ಶ್ರೀಮಂಗಲ
ದೇವಸ್ಥಾನದಿಂದ ಸುಮಾರು ಎರಡು ಕಿ. ಮೀ.ದೂರದಲ್ಲಿರುವ ಪಾರಂಪರಿಕವಾಗಿ ಕದಿರು ತೆಗೆಯುವ ಮಲ್ಲೇಂಗಡ ಕುಟುಂಬಸ್ಥರ ಗದ್ದೆಗೆ ದೇವಸ್ಥಾನದಿಂದ ತಳಿಯತಕ್ಕಿ ಬೊಳಕ್, ಓಡ್ಡೋಲಗ ದೊಂದಿಗೆ ತೆರಳಿ ಕದಿರು ತೆಗೆದು ದೇವಸ್ಥಾನಕ್ಕೆ ತರಲಾಯಿತು. ಪಟಾಕಿ ಸಿಡಿಸಿ, ಓಡ್ಡೋಲಗಕ್ಕೆ ಗ್ರಾಮಸ್ಥರು ಕುಣಿದು ಸಂಭ್ರಮಿಸಿದರು. ಪುತ್ತರಿ ಪ್ರಯುಕ್ತ ವಿಶೇಷ ಖಾದ್ಯ ತಂಬಿಟ್ಟು ನೊಂದಿಗೆ ಸಾಮೂಹಿಕ ಊಟೋಪಚಾರ ನಡೆಯಿತು.
ದೇವತಕ್ಕ ಆಣ್ಣೀರ ಕುಟುಂಬದ ದಾದಾ ಗಣಪತಿ, ನಾಡ್ ತಕ್ಕ ಕುಟುಂಬ ಕಾಯಪಂಡ ಕುಟುಂಬದ ಅಯ್ಯಪ್ಪ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಚೋನಿರ ಸುಬ್ರಮಣಿ, ಕಾರ್ಯದರ್ಶಿ ಬಲ್ಯಮೀದೇರಿರ ಸಂಪತ್, ಉಪಾಧ್ಯಕ್ಷ ಕಾಯಪಂಡ ಸ್ಟಾಲಿನ್ ಗಣಪತಿ, ಖಜಾಂಚಿ ಬಲ್ಯಮೀದೇರಿರ ಚೇತನ್ ಸೋಮಣ್ಣ, ಕಾಯಪಂಡ ಸುರೇಂದ್ರ, ಕಾಯಪಂಡ ಕಾವೇರಪ್ಪ, ಅಣ್ಣೀರ ಸರು, ಅಣ್ಣೀರ ಲೋಕೇಶ್, ಕಾಯಪಂಡ ಸುನಿಲ್, ಮೀದೇರಿರ ಗಣಪತಿ, ಬಲ್ಯಮೀದೇ ರಿರ ರನ್ನು, ಮಲ್ಲೇಂಗಡ ಶಮ್ಮಿ ನರೇಂದ್ರ ಹಾಗೂ ಮುಖ್ಯ ಅರ್ಚಕರಾದ ಗಿರೀಶ್ ಹಾಗೂ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.