ಕನ್ನಡಪ್ರಭ ವಾರ್ತೆ ಶಹಾಪುರ
ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಡ ಮಧ್ಯಮ ವರ್ಗದವರ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳನ್ನ ಪಡೆದಂತಹ ಫಲಾನುಭವಿಗಳ ಜೊತೆ ಸಂವಾದ ಹಾಗೂ ಪಡೆಯದೆ ಇರುವಂತಹ ಫಲಾನುಭವಿಗಳಿಗೂ ಯೋಜನೆಗಳನ್ನು ತಲುಪಿಸಬೇಕೆಂಬ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ರೂಪಿಸಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆಗೂ ತಲುಪಿಸಬೇಕೆನ್ನುವುದು ನರೇಂದ್ರ ಮೋದಿ ಅವರ ಕನಸು. ಆ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಬ್ಯಾಂಕುಗಳಿಂದ ನೇರ ಸಾಲ ನೀಡುವ ಯೋಜನೆಯನ್ನು ಆಯೋಜಿಸಿದೆ ಎಂದರು.ಪ್ರಮುಖವಾಗಿ ಮುದ್ರಾ ಯೋಜನೆ, ಜನಧನ್ ಯೋಜನೆ, ಪಿಎಂ ವಿಶ್ವಕರ್ಮ ಯೋಜನೆ, ಉಜ್ವಲ ಯೋಜನೆ, ಕೃಷಿ ಸನ್ಮಾನ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿಯನ್ನ ಎಲ್ಇಡಿ ಪರದೆಯ ವಾಹನದೊಂದಿಗೆ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲರೆಡ್ಡಿ ನಾಯ್ಕಲ್ ಮಾತನಾಡಿ, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 6,000 ರು. ಗಳು ನೀಡಲಾಗುತ್ತಿದೆ. ದೇಶದ ಜನರ ಸ್ವಾವಲಂಬನೆ ಬದುಕಿಗೆ ಕೇಂದ್ರ ಸರ್ಕಾರದ ಯೋಜನೆಗಳು ಆಸರೆಯಾಗಿದೆ. ಈ ಯೋಜನೆಗಳ ಯಶಸ್ವಿಗೆ ಕೈಜೋಡಿಸಬೇಕೆಂದು ಹೇಳಿದರು.