ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಭಾರತೀನಗರದ ಸುತ್ತಮುತ್ತಲ ಗ್ರಾಮಗಳು ಸುಭಿಕ್ಷವಾಗಿರಲಿ ಎಂದು ಸಂಕಲ್ಪ ಮಾಡಿ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇವರಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ದೇವಾಲಯದ ಪ್ರಧಾನ ಅರ್ಚಕ ಯು.ವಿ.ಗಿರೀಶ್ ಹಾಗೂ ಅರ್ಚಕ ವೆಂಕಟೇಶ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಈ ವೇಳೆ ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಈ ವೇಳೆ ಯೋಜನೆ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ್ ನೆಲ್ಲಿತ್ತಾಯ, ಮಂಡ್ಯ ಜಿಲ್ಲಾ ನಿರ್ದೇಶಕಿ ಚೇತನಾ, ಭಾರತೀನಗರ ವೃತ್ತದ ಯೋಜನಾಧಿಕಾರಿ ಸುವರ್ಣಾ ಭಟ್, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರಾದ ಮೆಣಸಗೆರೆ ಧರಣಿ ಪುಟ್ಟೇಗೌಡ, ಕ್ಯಾತಘಟ್ಟ ರವಿಕುಮಾರ್, ಶ್ರೀ ವೆಂಕಟೇಶ್ವರ ಸೇವಾ ಸಮಿತಿ ಅಧ್ಯಕ್ಷ ಪೂಜೂರಿ ವೆಂಕಟೇಗೌಡ, ಯೋಜನೆ ಒಕ್ಕೂಟದ ಅಧ್ಯಕ್ಷೆ ವೆಂಕಟಲಕ್ಷ್ಮೀ, ಮೇಲ್ವಿಚಾರಕರಾದ ಚಿತ್ರಾವತಿ, ಸುಮಾ, ಅಶ್ವಿನಿ ವೀಣಾ, ಮನೀಶ್, ಗಿರೀಶ್, ಆದರ್ಶ, ಹಾಗೂ ಸೇವಾಪ್ರತಿನಿಧಿಗಳು ಭಾಗವಹಿಸಿದ್ದರು.ಚನ್ನಪ್ಪನದೊಡ್ಡಿಯಲ್ಲಿಂದು ಸಾಮೂಹಿಕ ಬಾಡೂಟ ಅನ್ನಸಂತರ್ಪಣೆ
ಮಾ.20ರಂದು ರಾತ್ರಿ 8 ಗಂಟೆಗೆ ಗ್ರಾಮದ ಬೀದಿ ಬೀದಿಗಳಲ್ಲಿ ಪಲ್ಲಕಿ ಉತ್ಸವ, ಪೂಜಾಕುಣಿತ ಮತ್ತು ವಿರಗಾಸೆ ಕುಣಿತವು ತಮಟೆ ನಗಾರಿ ನಾದಮೇಳದೊಂದಿಗೆ ನಡೆಯಿತು.