ನವಲಗುಂದ: ತಾಲೂಕಿನ ತಿರ್ಲಾಪುರ ಗ್ರಾಮದ ಗ್ರಾಮದೇವತೆಯರ ಜಾತ್ರಾ ಮಹೋತ್ಸವ ಮೇ 2ರಿಂದ ಮೇ 6ರ ವರೆಗೆ ಅದ್ಧೂರಿಯಾಗಿ ನಡೆಯಲಿದೆ.
ಶಿರಹಟ್ಟಿಯ ಜ. ಫಕ್ಕೀರ ಸಿದ್ಧರಾಮ ಸ್ವಾಮಿಗಳು, ನವಲಗುಂದ ಪಂಚಗೃಹ ಹಿರೇಮಠದ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿರಕೋಳ ಹಿರೇಮಠದ ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಸುಳ್ಳ ಗ್ರಾಮದ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು, ಮೊರಬ ಜಡಿಮಠದ ಮಹೇಶ್ವರ ಶಿವಾಚಾರ್ಯರು, ಬ್ಯಾಹಟ್ಟಿಯ ಮರುಳಸಿದ್ದೇಶ್ವರ ಶಿವಾಚಾರ್ಯರು, ಮಣಕವಾಡದ ಅಭಿನವ ಮೃತ್ಯುಂಜಯ ಶ್ರೀಗಳು, ಕಲ್ಯಾಣಪುರಮಠದ ಬಸವಣ್ಣಜ್ಜನವರು, ಗವಿಮಠದ ಅಭಿನವ ಬಸವಲಿಂಗ ಸ್ವಾಮೀಜಿ, ಬಾಗಲಕೋಟೆ ವಿಶ್ವನಾಥ ಶಿವಯೋಗಿಗಳು, ಹೆಬ್ಬಳ್ಳಿ ಚೈತನ್ಯಾಶ್ರಮದ ದತ್ತಾವಧೂತ ಗುರುಗಳು, ಅಜಾತನಾಗಲಿಂಗ ಸ್ವಾಮಿಮಠದ ವೀರೇಂದ್ರ ಸ್ವಾಮೀಜಿ, ಜಕ್ಕನಾಯಕನಕೊಪ್ಪ ಚನ್ನಬಸವೇಂದ್ರ ಲೀಲಾಮಠದ ಮಾತೋಶ್ರೀ ಶಿವಯೋಗಿನಿದೇವಿ ಸಾನ್ನಿಧ್ಯ ವಹಿಸುವರು.
ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಂತೋಷ ಲಾಡ್, ಶಾಸಕರಾದ ಎನ್.ಎಚ್. ಕೋನರಡ್ಡಿ, ಪ್ರದೀಪ್ ಶೆಟ್ಟರ್, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿನೋದ ಅಸೂಟಿ ಭಾಗವಹಿಸುವರು,ವಿವಿಧ ಕಾರ್ಯಕ್ರಮ: ಮೇ 2ರಂದು ಗ್ರಾಮದೇವತೆಗಳ ಮೂರ್ತಿ ಮೆರವಣಿಗೆ ಮೂಲಕ ಗ್ರಾಮಕ್ಕೆ ಬರಮಾಡಿಕೊಂಡು ಚೌತ ಮನೆಯಲ್ಲಿ ಕೂರಿಸಲಾಗುವುದು. ಮೇ 3, 4ರಂದು ಗ್ರಾಮದೇವತೆಯರ ಮೆರವಣಿಗೆ ನಡೆಯಲಿದೆ. ಹಲಗಿಮೇಳ ಹಾಗೂ ಡೊಳ್ಳು ಜೋಗಿತಿಯರ ನೃತ್ಯದ ತಂಡ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದೆ.