ಇಂದಿರಾ ನಗರ ದೇವಸ್ಥಾನದಲ್ಲಿ ಗ್ರಾಮದೇವತಾ ಪ್ರತಿಷ್ಠಾಪನೆ ಇಂದು

KannadaprabhaNewsNetwork |  
Published : Feb 18, 2025, 12:32 AM IST
17 ಎಚ್‍ಆರ್‍ಆರ್ 02ಹರಿಹರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಇಂದಿರಾ ನಗರದ ಗ್ರಾಮದೇವತಾ ದೇವಸ್ಥಾನದ ಪದಾಧಿಕಾರಿಗಳು ಮಾತನಾಡಿದರು. | Kannada Prabha

ಸಾರಾಂಶ

ಇಲ್ಲಿಯ ಇಂದಿರಾ ನಗರದ ಗ್ರಾಮದೇವತೆ ದೇವಸ್ಥಾನದಲ್ಲಿ ಫೆ.18ರಂದು ಬೆಳಗ್ಗೆ ಗ್ರಾಮದೇವತೆ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿ ಮಂಜುನಾಥ ಚುಂಚಳ್ಳಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಹರಿಹರ ಇಲ್ಲಿಯ ಇಂದಿರಾ ನಗರದ ಗ್ರಾಮದೇವತೆ ದೇವಸ್ಥಾನದಲ್ಲಿ ಫೆ.18ರಂದು ಬೆಳಗ್ಗೆ ಗ್ರಾಮದೇವತೆ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಸಮಿತಿ ಮಂಜುನಾಥ ಚುಂಚಳ್ಳಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಪನಹಳ್ಳಿ ತೆಗ್ಗಿನಮಠದ ವರಸದ್ಯೋಜಾತ ಶ್ರೀ ದಿವ್ಯ ಸಾನ್ನಿಧ್ಯದಲ್ಲಿ ಪ್ರಾಣ ಪ್ರತಿಷ್ಠಾಪನಾ ಕಾರ್ಯ ಆಯೋಜಿಸಲಾಗಿದೆ. 35 ವರ್ಷಗಳಿಂದ ಇಂದಿರಾ ನಗರದ ಗ್ರಾಮದೇವತಾ ದೇವಸ್ಥಾನದಲ್ಲಿ ಕೇವಲ ಊರಮ್ಮನ ಭಾವಚಿತ್ರ ಹಾಗೂ ಕುಂಭವನ್ನು ಸ್ಥಾಪಿಸಿ ಪೂಜೆ ಮಾಡಲಾಗುತಿತ್ತು ಎಂದರು.

ಈ ಭಾಗದ ಭಕ್ತರ ಒತ್ತಾಸೆ ಹಾಗೂ ನಗರದ ಕಸಬಾ ಮತ್ತು ಮಹಜೇನಹಳ್ಳಿ ಗ್ರಾಮದ ಗೌಡರ ಸಮ್ಮತಿ ಮೇರೆಗೆ ದೇವಿಯ ನೂತನ ಮೂರ್ತಿಯನ್ನು ಮಾಡಿಸಿದ್ದು, ಫೆ.18ರಂದು ಬೆಳಗ್ಗೆ 6.30 ರಿಂದ ವಿವಿಧ ಹೋಮ ಹವನ ನೆರವೇರಿಸುವ ಮೂಲಕ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುವುದು ಎಂದರು.

ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕರಾದ ಎಸ್. ರಾಮಪ್ಪ, ಎಚ್.ಎಸ್. ಶಿವಶಂಕರ್, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ಬಿಜೆಪಿಯ ಚಂದ್ರಶೇಖರ್ ಪೂಜಾರ್, ನಗರಸಭೆ ಅಧ್ಯಕ್ಷೆ ಕವಿತಾ ಬೇಡರ್, ಉಪಾಧ್ಯಕ್ಷ ಎಂ. ಜಂಬಣ್ಣ, ಗ್ರಾಮದೇವತೆ ಉತ್ಸವ-2025ರ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಇತರರಿಗೆ ಆಹ್ವಾನ ನೀಡಲಾಗಿದೆ. ಸರ್ವರು ಆಗಮಿಸುವ ನಿರೀಕ್ಷೆಯಿದೆ ಎಂದರು.

ದೇವಸ್ಥಾನ ಸಮಿತಿಯ ಜೆ. ಕೃಷ್ಣಮೂರ್ತಿ ಮಾತನಾಡಿದರು. ಸುದ್ದಿಗೋಷ್ಟಿಯಲ್ಲಿ ನಗರಸಭೆ ಅಧ್ಯಕ್ಷೆ ಕವಿತಾ ಬೇಡರ್, ವಕೀಲ ಮಾರುತಿ ಬೇಡರ್, ದೇವಸ್ಥಾನ ಸಮಿತಿಯ ಎನ್. ಟೇಕೋಜಿರಾವ್, ಜಿ.ಪ್ರದೀಪ್ ಇತರರಿದ್ದರು.

- - - -17ಎಚ್‍ಆರ್‍ಆರ್02:

ಹರಿಹರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಇಂದಿರಾ ನಗರ ಗ್ರಾಮದೇವತಾ ದೇವಸ್ಥಾನದ ಪದಾಧಿಕಾರಿಗಳು ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎನ್‌ಡಿಎ ಮೈತ್ರಿ ಕೂಟದಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ
ಪತ್ರಕರ್ತರಿಗೆ ಸ್ಪಂದಿಸುತ್ತಿದ್ದ ಶಾಮನೂರು ಸದಾ ಸ್ಮರಣೀಯ