ರಚನಾತ್ಮಕ ಮನೋಭಾವದಿಂದ ಗ್ರಾಮ ಅಭಿವೃದ್ಧಿ ಸಾಧ್ಯ: ಎಚ್.ಕೆ. ಪಾಟೀಲ್

KannadaprabhaNewsNetwork |  
Published : Jan 18, 2026, 02:30 AM IST
ಅಂತೂರ-ಬೆಂತೂರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ, ಡಿಜಿಟಲ್ ಗ್ರಂಥಾಲಯದ ಕಟ್ಟಡ ಹಾಗೂ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಎಚ್‌.ಕೆ. ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಮುಳಗುಂದ ಸಮೀಪದ ಅಂತೂರ-ಬೆಂತೂರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ, ಡಿಜಿಟಲ್ ಗ್ರಂಥಾಲಯದ ನೂತನ ಕಟ್ಟಡ ಹಾಗೂ ಬಸ್ ನಿಲ್ದಾಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸಿದರು.

ಮುಳಗುಂದ: ಪ್ರಾಮಾಣಿಕ ಮತ್ತು ರಚನಾತ್ಮಕ ಮನೋಭಾವ ಇದ್ದಲ್ಲಿ ಗ್ರಾಮದಲ್ಲಿ ಪೂರ್ಣ ಪ್ರಮಾಣದ ಅಭಿವೃದ್ಧಿ ಕಾಮಗಾರಿಗಳು ನಡೆಯಲು ಸಾಧ್ಯವಾಗುತ್ತದೆ. ಗ್ರಾಮದಲ್ಲಿನ ಅಭಿವೃದ್ಧಿ ಕಟ್ಟಡಗಳನ್ನು ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಸಮೀಪದ ಅಂತೂರ-ಬೆಂತೂರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ, ಡಿಜಿಟಲ್ ಗ್ರಂಥಾಲಯದ ನೂತನ ಕಟ್ಟಡ ಹಾಗೂ ಬಸ್ ನಿಲ್ದಾಣ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಮುಕ್ತವಾಗಿವೆ. ಗ್ರಾಮಸ್ಥರು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅಕ್ಷರ ಗೊತ್ತಿಲ್ಲದವರು ಸಹ ಬಳಸಲು ಡಿಜಿಟಲ್ ಗ್ರಂಥಾಲಯ ಉಪಯುಕ್ತವಾಗಿದೆ. ತಂತ್ರಜ್ಞಾನದ ಮುಖಾಂತರ ರೈತರ ಜ್ಞಾನ ಕ್ಷಿತಿಜ ವಿಸ್ತರಿಸುವ ಪ್ರಯತ್ನ ಆಗಬೇಕು ಎಂದರು.

ಗ್ರಾಮದಲ್ಲಿ ಬಸ್ ಸ್ಟ್ಯಾಂಡ್, ಅಂಗನವಾಡಿ ನಿರ್ಮಾಣ, ರೈತರ ಹೊಲದಲ್ಲಿ ಬದು, ಕೃಷಿ ಹೊಂಡ, ಹೊಳಗಟ್ಟಿ ನಿರ್ಮಾಣದಂತಹ ಅನೇಕ ಕೆಲಸಗಳಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಳ್ಳುತ್ತಿದ್ದೇವು. ಆದರೆ ಈಗ ಅದನ್ನು ರದ್ದು ಮಾಡಿದ್ದಾರೆ. ಕೃಷಿ ಕಾರ್ಮಿಕರಿಗೆ ಹತ್ತಿರದಿಂದ ಉದ್ಯೋಗ ಸಿಗುತ್ತಿತ್ತು. ಕಾರ್ಮಿಕರಿಗೆ ಕೆಲಸ ಕೊಡದೆ ಇದ್ದರೆ ನಿರುದ್ಯೋಗ ಭತ್ತೆ ಕೊಡಬೇಕಾಗಿತ್ತು. ಅಂತಹ ಕಾನೂನು ನಾವು ರಾಷ್ಟ್ರದೊಳಗೆ ಮಾಡಿದ್ದೆವು. ಅಂತಹ ಕಾನೂನನ್ನು ಈಗ ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ಮೂಲಕ ರೈತ ಕಾರ್ಮಿಕರ ಶಕ್ತಿಯನ್ನು ಕ್ಷೀಣಿಸುವಂತೆ ಮಾಡಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಮೂಲಕ ಬಡತನ ನಿರ್ಮೂಲನೆ ಸಾಧ್ಯವಾಗಿದೆ. ಅದೇ ರೀತಿ ಸಣ್ಣ, ಅತಿ ಸಣ್ಣ ರೈತರಿಗೆ, ಕೃಷಿ ಕಾರ್ಮಿಕರಿಗೆ ಅನುಕೂಲವಾಗಿದ್ದ ಮನರೇಗಾ ಯೋಜನೆಯನ್ನು ಮತ್ತೆ ಆರಂಭಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಈ ವೇಳೆ ಗ್ರಾಪಂ ಅಧ್ಯಕ್ಷ ಪ್ರಕಾಶಗೌಡ ಪಾಟೀಲ, ಉಪಾಧ್ಯಕ್ಷೆ ನೀಲವ್ವ ಬಡ್ನಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಮುಖಂಡರಾದ ನಾರಾಯಣರಾವ್, ಅಪ್ಪಣ್ಣ ಇನಾಮತಿ, ರವಿ ಮೂಲಿಮನಿ, ಎನ್.ಜೆ. ಕುರಹಟ್ಟಿ, ಎಚ್.ಬಿ. ಹದ್ಲಿ, ಶಿವಪ್ರಕಾಶ ಮಣಕವಾಡ, ಪಿಡಿಒ ಕೆ.ಎಲ್. ಪೂಜಾರ, ಎಸ್.ಎಚ್. ಚೆಟ್ರಿ ಹಾಗೂ ಗ್ರಾಪಂ ಸದಸ್ಯರು, ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಭೆ ಹೊರಹೊಮ್ಮಲು ಕಲೋತ್ಸವ ಉತ್ತಮ ವೇದಿಕೆ: ಡಾ. ಎಂ.ಸಿ. ಸುಧಾಕರ್
ಜಿಲ್ಲಾಸ್ಪತ್ರೆ ರಸ್ತೆ ಗುಣಮಟ್ಟ ಪರಿಶೀಲಿಸಿದ ನಳಿನ್ ಅತುಲ್