ಕನ್ನಡಪ್ರಭ ವಾರ್ತೆ ಸಾಲಿಗ್ರಾಮ
ತಾಲೂಕಿನ ತಂದ್ರೆ ಗ್ರಾಪಂನಲ್ಲಿ ನಡೆದ ಗ್ರಾಮ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ತಲುಪಿಸುವ ಕೆಲಸ ಪ್ರತಿ ಇಲಾಖೆಯ ಅಧಿಕಾರಿಗಳು ಮಾಡಬೇಕು. ಆದರೆ ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಕೊಟ್ಟಿದ್ದರು. ಅವುಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ತಾಲೂಕು ಮಟ್ಟದ ಅಧಿಕಾರಿಗಳು ಸ್ಪಂದನೆ ನೀಡುತ್ತಿಲ್ಲ. ಇದರಿಂದ ಗ್ರಾಪಂ ಅಭಿವೃದ್ಧಿಗಳು ಕುಂಠಿತವಾಗುತ್ತಿದೆ. ಗ್ರಾಪಂ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳೊಂದಿಗೆ ತಾಲೂಕು ಮಟ್ಟದ ಅಧಿಕಾರಿಗಳು ಸ್ಪಂದನೆ ನೀಡದಿದ್ದರೆ ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.ಗ್ರಾಪಂಗೆ ಬರುವ ಅನುದಾನಗಳನ್ನು ಜನರಿಗೆ ಸಮರ್ಪಕವಾಗಿ ವಿತರಣೆ ಮಾಡಬೇಕು ಎಂದರೆ ಗ್ರಾಪಂಗೆ ಸಂಬಂಧಪಟ್ಟ ಎಲ್ಲ ಇಲಾಖೆಯ ಅಧಿಕಾರಿಗಳು ಗ್ರಾಮ ಸಭೆಯಲ್ಲಿ ಭಾಗವಹಿಸಿ ಜನರಿಗೆ ತಿಳಿಸಬೇಕು. ಆದರೆ ಗ್ರಾಪಂ ಪಿಡಿಒ ಮತ್ತು ಆಡಳಿತ ಮಂಡಳಿ ಸದಸ್ಯರು ಗ್ರಾಮ ಸಭೆಯನ್ನು ಮಾಡುವಂತಹ ಅನಿವಾರ್ಯ ಎದುರಾಗಿದೆ, ಯಾವುದೇ ಇಲಾಖೆಯಿಂದ ತಾಲೂಕು ಮಟ್ಟದ ಅಧಿಕಾರಿಗಳಾಗಲಿ ಅಥವಾ ಇಲಾಖೆಯ ಸಿಬ್ಬಂದಿಗಳಾಗಲಿ ಗ್ರಾಮ ಸಭೆಗಳಿಗೆ ಗೈರಾಗುವುದು ಎಷ್ಟು ಸರಿ ? ಇದೆಲ್ಲ ತಿಳಿದಿದ್ದರೂ ಜಿಲ್ಲಾ ಕಾರ್ಯ ನಿರ್ವಾಹಕ ಅಧಿಕಾರಿ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮೇಲಾಧಿಕಾರಿಗಳಿಗೆ ಪ್ರಶ್ನಿಸಿದರು.
ಗ್ರಾಮ ಸಭೆಯಲ್ಲಿ ರಸ್ತೆ ಚರಂಡಿ ಆಶ್ರಯ ಮನೆ ಕೊಟ್ಟಿಗೆ ನಿರ್ಮಾಣ 15ನೇ ಹಣಕಾಸು ನರೇಗಾ ಯೋಜನೆ ಎಸ್ ಸಿ ಎಸ್ ಟಿ ಸಮುದಾಯದ ಸೌಲಭ್ಯ ಕುಡಿಯುವ ನೀರು ಬಿದ್ದು ದೀಪ ಕೆರೆಗಳ ಅಭಿವೃದ್ಧಿ ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಗಿತು ಯಾವುದೇ ಯೋಜನೆಗಳಿಗೆ ಫಲಾನುಭವಿಗಳನ್ನು ಗ್ರಾಮಸಭೆಯಲ್ಲೇ ಆಯ್ಕೆ ಮಾಡುವ ಹೆಸರೇ ಅಂತಿಮವಾಗಿರುತ್ತದೆ ಎಂದು ತಿಳಿಸಿದರು.