ತಲೆಕೆಳಗಾಗಿ ಧ್ವಜಾರೋಹಣ ಮಾಡಿದ ಬಾಬುರಾವ ಚವ್ಹಾಣ: ಗ್ರಾಮಸ್ಥರ ದೂರು

KannadaprabhaNewsNetwork |  
Published : Aug 17, 2025, 01:34 AM IST

ಸಾರಾಂಶ

ಬೆನಕನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣವನ್ನು ಶಾಲೆಯ ಸಿಆರ್‌ಸಿ ಬಾಬುರಾವ ಚವ್ಹಾಣ ಇವರು ದೇಶದ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ ಧ್ವಜಾರೋಹಣ ನೇರವೇರಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕೆಂದು ಗ್ರಾಮಸ್ಥರು ಬಿಇಒ ಅವರಿಗೆ ದೂರು ಸಲ್ಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಂಚೋಳಿ

ಬೆನಕನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣವನ್ನು ಶಾಲೆಯ ಸಿಆರ್‌ಸಿ ಬಾಬುರಾವ ಚವ್ಹಾಣ ಇವರು ದೇಶದ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ ಧ್ವಜಾರೋಹಣ ನೇರವೇರಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕೆಂದು ಗ್ರಾಮಸ್ಥರು ಬಿಇಒ ಅವರಿಗೆ ದೂರು ಸಲ್ಲಿಸಿದ್ದಾರೆ.

ತಾಲೂಕಿನ ಬೆನಕನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ೭೯ನೇ ಸ್ವಾತಂತ್ರ್ಯೋತ್ಸ ದಿನಾಚರಣೆ ಬೆಳಿಗ್ಗೆ ೮.೩೦ಕ್ಕೆ ಧ್ವಜಾರೋಹಣ ಮಾಡುವಾಗ ಆ ಶಾಲೆಯ ಸಿ.ಆರ್.ಸಿ ಬಾಬುರಾವ ಚವ್ಹಾಣ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ ನೇರವೇರಿಸಿದ್ದಾರೆ. ಇದನ್ನು ಗಮನಿಸಿದ ಶಾಲೆ ಸುಧಾರಣೆ ಸಮಿತಿ ಅಧ್ಯಕ್ಷ ಕಲ್ಯಾಣರಾವ ಮತ್ತು ಉಪಾಧ್ಯಕ್ಷ ಮಹಾದೇವ ಹಾಗೂ ಸ್ಥಳೀಯರು ಗಮನಕ್ಕೆ ತಂದರು ಸಹ ಸಿಆರ್‌ಸಿ ಅವರು ಗ್ರಾಮಸ್ಥರ ಮಾತಿಗೆ ಗಮನಕೊಡದೇ ನೀವು ಅಧಿಕ ಪ್ರಸಂಗ ಮಾಡಬೇಡಿ ಎಂದು ಗ್ರಾಮಸ್ಥರಿಗೆ ಅವಾಚ್ಯ ಶಬ್ಧಗಳಿಂದ ಬೈದು ಕಳಿಸಿದ್ದಾರೆ. ಕಾರಣ ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿಸಿದ ಸಿಆರ್‌ಸಿ ಬಾಬುರಾವ ಚವ್ಹಾಣ ವಿರುದ್ಧ ಕಾನೂನು ಕ್ರಮ ಕೈಕೊಳ್ಳಲಾಗುವಂತೆ ಗ್ರಾಮಸ್ಥರಾದ ಮೀರಪಟೇಲ, ಸಂತೋಷ, ಲಾಲಪ್ಪ ಅನೀಲಕುಮಾರ ಗುರುಲಿಂಗ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ನೊಟೀಸ್‌: ದೇಶದ ತ್ರಿವರ್ಣ ಧ್ವಜವನ್ನು ಉಲ್ಟಾ ಮಾಡಿ ಧ್ವಜಾರೋಹಣ ನೇರವೇರಿಸಿದ ಬಾಬುರಾವ ಚವ್ಹಾಣ ಅವರಿಗೆ ಕಾರಣ ಕೇಳಿ ನೋಟಿಸ್‌ ಕೊಡಲಾಗಿದೆ. ನೋಟಿಸ್‌ಗೆ ಉತ್ತರ ನೀಡಿದ ನಂತರ ಮುಂದಿನ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಬಿಇಒ ಲಚಮಯ್ಯ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ