ರಾಮನಗರ: ಕಲ್ಲು ಗಣಿಗಾರಿಕೆ ಟಿಪ್ಪರ್ ಲಾರಿಗಳ ಸಂಚಾರದಿಂದ ಉಂಟಾಗುತ್ತಿರುವ ಧೂಳಿನ ಸಮಸ್ಯೆಯಿಂದ ಬೇಸತ್ತ ಹೆಗ್ಗಡಗೆರೆ ಗ್ರಾಮದ ನಿವಾಸಿಗಳು ಮಂಗಳವಾರ ಲಾರಿಗಳನ್ನು ಅಡ್ಡಗಟ್ಟಿ ಪ್ರತಿಭಟಿಸಿದರು.
ಜಲ್ಲಿಕಲ್ಲು ಮತ್ತು ಎಂಸ್ಯಾಂಡ್ ಸಾಗಣೆ ಮಾಡುವ ಟಿಪ್ಪರ್ ಲಾರಿಗಳ ಮಿತಿ ಮೀರಿದ ಓಡಾಟದಿಂದ ಮನೆಗಳಿಗೆ ಯಥೇಚ್ಚವಾಗಿ ಧೂಳು ಹರಡುತ್ತಿದೆ. ಅಲ್ಲದೆ ಹಗಲು ರಾತ್ರಿ ಬಿಡುವಿಲ್ಲದೆ ಸಂಚರಿಸುವ ಲಾರಿಗಳ ಮೊರೆತದಿಂದ ನಿದ್ರೆ ಮಾಡಲಾಗುತ್ತಿಲ್ಲ, ಸಾವಿರಾರು ಟಿಪ್ಪರ್ ಲಾರಿಗಳ ಓಡಾಟ ಜನಜೀವನದ ಮೇಲೆ ಹೆಚ್ಚು ದಷ್ಪರಿಣಾಮವನ್ನು ಬಿರುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಲಾರಿಗಳನ್ನು ತಡೆದರು. ಇದರಿಂದ ರಸ್ತೆಯಲ್ಲಿ ನೂರಾರು ಟಿಪ್ಪರ್ ಲಾರಿಗಳು ಸಾಲುಗಟ್ಟಿ ನಿಂತಿದ್ದವು.
ಕ್ರಷರ್ ಗಳಿಂದ ಜಲ್ಲಿಕಲ್ಲು ಹಾಗೂ ಎಂಸ್ಯಾಂಡ್ ಸಾಗಣೆ ಮಾಡುವ ದೈತ್ಯಾಕಾರದ ಟಿಪ್ಪರ್ ಲಾರಿಗಳು ಓವರ್ ಲೋಡ್ ತುಂಬಿಕೊಂಡು ರಸ್ತೆಗಿಳಿಯುತ್ತವೆ. ಪ್ರತಿದಿನ ಸಂಜೆ ಕಲ್ಲು ಗಣಿಗಾರಿಕೆಗಳಲ್ಲಿ ಬಳಸುವ ಸಿಡಿಮದ್ದುಗಳ ಶಬ್ದವು ಭೂಕಂಪನದ ಅನುಭವವಾಗುತ್ತದೆ. ವಾಯು ಮಾಲಿನ್ಯದ ಜತೆಗೆ ಶಬ್ದ ಮಾಲಿನ್ಯದಿಂದ ನಿದ್ರೆ ಮತ್ತು ನೆಮ್ಮದಿ ಹಾಳಾಗಿದೆ. ಈ ಜ್ವಲಂತ ಸಮಸ್ಯೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಹ ಯಾವ ಕ್ರಮವನ್ನು ವಹಿಸಿಲ್ಲ. ಹಾಗಾಗಿ ಲಾರಿಗಳನ್ನು ತಡೆದಿದ್ದೇವೆ. ಲಾರಿಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ.ಕೋಟ್............
-ಸೋಮಶೇಖರ್, ಸ್ಥಳೀಯ, ಹೆಗ್ಗಡಗೆರೆ
ಬಿಡದಿಯ ಹೆಗ್ಗಡಗೆರೆ ಗ್ರಾಮದಲ್ಲಿ ಎಂಸ್ಯಾಂಡ್ ಸಾಗಣೆ ಮಾಡುತ್ತಿದ್ದ ಟಿಪ್ಪರ್ ಲಾರಿಗಳನ್ನು ತಡೆದಿರುವ ಗ್ರಾಮಸ್ಥರು.