ವಿದ್ಯುತ್‌ ಮಾರ್ಗ ದುರಸ್ತಿ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

KannadaprabhaNewsNetwork |  
Published : Jul 26, 2024, 01:39 AM IST
 ಕಿರಗಂದೂರು, ತಾಕೇರಿ, ತಲ್ತಾರೆಶೆಟ್ಟಳ್ಳಿ ಗ್ರಾಮಗಳ ವಿದ್ಯುತ್ ಮಾರ್ಗವನ್ನು ದುರಸ್ತಿಪಡಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಸೆಸ್ಕ್ ಕಚೇರಿ ಮುಂಭಾಗ ಪ್ರತಿಭಟನೆ | Kannada Prabha

ಸಾರಾಂಶ

ಸೋಮವಾರಪೇಟೆ ತಾಲೂಕಿನ ಕಿರಗಂದೂರು, ತಾಕೇರಿ, ತಲ್ತಾರೆಶೆಟ್ಟಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ನಿಲುಗಡೆಗೊಂಡಿದ್ದು, ಕೂಡಲೆ ವಿದ್ಯುತ್ ಮಾರ್ಗ ದುರಸ್ತಿಪಡಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಸೆಸ್ಕ್ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ತಾಲೂಕಿನ ಕಿರಗಂದೂರು, ತಾಕೇರಿ, ತಲ್ತಾರೆಶೆಟ್ಟಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ನಿಲುಗಡೆಗೊಂಡಿದ್ದು, ಕೂಡಲೆ ವಿದ್ಯುತ್ ಮಾರ್ಗ ದುರಸ್ತಿಪಡಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಸೆಸ್ಕ್ ಕಚೇರಿ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.ಕಿರಗಂದೂರು ಗ್ರಾಮದಲ್ಲಿ 10 ಕಂಬಗಳು ನೆಲಕ್ಕುರುಳಿದ್ದು ಕಳೆದ 20 ದಿನಗಳಿಂದ ವಿದ್ಯುತ್ ಇಲ್ಲ ಎಂದು ಕಿರಗಂದೂರು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಚಿದಾನಂದ ಅಸಮಾಧಾನ ವ್ಯಕ್ತಪಡಿಸಿದರು.

ತಾಕೇರಿ ಗ್ರಾಮದ 40 ಮನೆಗಳಿಗೆ ಒಂದು ವಾರದಿಂದ ವಿದ್ಯುತ್ ಇಲ್ಲದೆ ಸಮಸ್ಯೆಯಾಗಿದೆ. ಕೂಡಲೆ ವಿದ್ಯುತ್ ಮಾರ್ಗ ಸರಿಪಡಿಸಬೇಕು ಎಂದು ತಾಕೇರಿ ಪೊನ್ನಪ್ಪ ಆಗ್ರಹಿಸಿದರು.

ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಸೆಸ್ಕ್ ಸಿಬ್ಬಂದಿ ಶಕ್ತಿಮೀರಿ ದುರಸ್ತಿ ಕಾರ್ಯ ಮಾಡುತ್ತಿದ್ದಾರೆ. ಮೂರ್ನಾಲ್ಕು ದಿನಗಳಲ್ಲಿ ಮಾರ್ಗ ಸರಿಪಡಿಸಿ ವಿದ್ಯುತ್ ಸಂಪರ್ಕ ಒದಗಿಸಲಾಗುವುದು ಎಂದು ಎಇಇ ರವಿಕುಮಾರ್ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಾಸ್‌ ಪಡೆಯಲಾಯಿತು.

ಗ್ರಾಮಸ್ಥರಾದ ಶಿವಕುಮಾರ್, ಈರಪ್ಪ, ಜೀವನ್, ಸಂದೀಪ್, ಬಿ.ಪಿ.ಅನಿಲ್, ಸುರೇಶ್, ಬಿ.ಎಸ್.ನಾಗೇಶ್, ಸೋಮಯ್ಯ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ