ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಸೆಸ್ಕ್ ಕಚೇರಿ ಎದುರು ರೈತರು ಕರ್ತವ್ಯ ನಿರತ ಸಿಬ್ಬಂದಿಯನ್ನು ಕಚೇರಿಯಿಂದ ಹೊರ ಕಳುಹಿಸಿ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವವೆರಗೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ಸ್ಥಳಕ್ಕೆ ಇಲಾಖೆ ಉನ್ನತ ಅಧಿಕಾರಿಗಳು ಬಂದು ಭರವಸೆ ನೀಡಬೇಕು ಎಂದು ಆಗ್ರಹಿಸಿದರು.
ರೈತರ ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ಗಂಟೆಗಳ ತ್ರಿಫೆಸ್ ವಿದ್ಯುತ್ ನೀಡಬೇಕು ಎಂಬ ಸರ್ಕಾರದ ಆದೇಶವಿದ್ದರೂ ಇದು ಪಾಲನೆಯಾಗುತ್ತಿಲ್ಲ. ಸೆಸ್ಕ್ ಲೈನ್ಮ್ಯಾನ್ಗಳು ವಿದ್ಯುತ್ ಅಡಚಣೆಯಾದರೆ ತಕ್ಷಣ ದುರಸ್ತಿ ಕೆಲಸ ಮಾಡುವುದಿಲ್ಲ. ರೈತರು ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ಸೆಸ್ಕ್ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ವರ್ತನೆಯಿಂದ ರೈತರು ಬೆಳೆ ಅನುಭವಿಸಬೇಕಾಗಿದೆ ಎಂದು ಆರೋಪಿಸಿದರು.ಕಳೆದ ಒಂದೂವರೆ ತಿಂಗಳಿನಿಂದ ರೈತರಿಗೆ ವಿದ್ಯುತ್ ಸಮಸ್ಯೆ ಎದುರಾಗಿದೆ. ಈ ಭಾಗಕ್ಕೆ ಮಹಿಳಾ ಜೆಇಯನ್ನು ನೇಮಕ ಮಾಡಲಾಗಿದೆ. ರಾತ್ರಿ ವೇಳೆಯಲ್ಲಿ ವಿದ್ಯುತ್ ಅಡಚಣೆಯಾದರೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ. ಕೆಲ ರೈತರು ಬೆಳೆ ಒಣಗುವ ಭಯದಿಂದ ರಾತ್ರಿ ವೇಳೆಯಲ್ಲೂ ಕರೆ ಮಾಡಿ ಬೈಯಬೇಕಾಗಿದೆ. ನಮಗೆ ಮಹಿಳಾ ಜೆಇ ಅವರನ್ನು ಬದಲಾಯಿಸಿಕೊಡಬೇಕು ಎಂದು ಆಗ್ರಹಿಸಿದರು.
ಸೆಸ್ಕ್ ಎಇಇ ಅವರ ಭರವಸೆ ಮೇರೆಗೆ ಪ್ರತಿಭಟನೆ ಕೈಬಿಡಲಾಯಿತು. ಪ್ರತಿಭಟನೆಯಲ್ಲಿ ಬೇವಿನಕುಪ್ಪೆ ಅನಿಲ್ಕುಮಾರ್, ಜಯರಾಮು, ಜವರಪ್ಪ, ಶೇಖರ್, ದಿಲೀಪ್, ಆನಂದ, ಸುರೇಶ್, ಮನು, ತಮ್ಮಣ್ಣ ಇತರರು ಇದ್ದರು.