ವಿನಯ ತಿಮ್ಮಾಪುರ ಜನ್ಮದಿನ: ಆರೋಗ್ಯ ತಪಾಸಣೆ ಶಿಬಿರ, ಬೃಹತ್ ಉದ್ಯೋಗ ಮೇಳ

KannadaprabhaNewsNetwork |  
Published : Jan 25, 2026, 03:00 AM IST
ವಿನಯ ತಿಮ್ಮಾಪೂರ ಹುಟ್ಟುಹಬ್ಬ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ * ಬೃಹತ್ ಉದ್ಯೋಗ ಮೇಳ ಆಯೋಜನೆ * ವಿವಿಧ ಸ್ಪರ್ಧೆಗಳು | Kannada Prabha

ಸಾರಾಂಶ

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪುರ ಜನ್ಮದಿನ ನಿಮಿತ್ತ ಜ.27, 28ರಂದು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪುರ ಜನ್ಮದಿನ ನಿಮಿತ್ತ ಜ.27, 28ರಂದು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿನಯ ತಿಮ್ಮಾಪುರ ಅಭಿಮಾನಿ ಬಳಗ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಚನ್ನು ಅಂಬಿ ಅವರು, ಜ.27ರಂದು ಬೆಳಗ್ಗೆ ಮುಧೋಳದ ನಗರದ ವಿವಿಧ ದೇವಸ್ಥಾನಗಳಲ್ಲಿ ಪೂಜಾ ಕಾರ್ಯಕ್ರಮ ಆಯೋಜಿಸಿದೆ. ಉಚಿತ ಆರೋಗ್ಯ ತಪಾಸಣೆ ಶಿಬಿರ, ಕ್ವಿಜ್ ಸ್ಪರ್ಧೆ, ರಕ್ತದಾನ ಶಿಬಿರ, ಹೆಲ್ಮೆಟ್ ವಿತರಣೆ ಮಾಡಲಾಗುವುದು ಎಂದು ಹೇಳಿದರು.

28ರಂದು ಬೆಳಗ್ಗೆ 10.30ಕ್ಕೆ ಮುಧೋಳದ ದಾನಮ್ಮದೇವಿ ಕಲ್ಯಾಣ ಮಂಟಪದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸುಮಾರು 100ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ. 10 ಸಾವಿರಕ್ಕೂ ಅಧಿಕ ಉದ್ಯೋಗ ಅವಕಾಶಗಳು ಸಿಗಲಿವೆ. ಜಿಲ್ಲೆಯ ಉದ್ಯೋಗಾಂಕ್ಷಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ದಾನಮ್ಮದೇವಿ ದೇವಸ್ಥಾನದಲ್ಲಿ ಜ.27ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಆರೋಗ್ಯ ಶಿಬಿರ ನಡೆಯಲಿದ್ದು, ನುರಿತ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ವಿನಯ ತಿಮ್ಮಾಪುರ ಅವರ 31ನೇ ಜನ್ಮದಿನವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿ ಬಳಗ ತೀರ್ಮಾನಿಸಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವಕುಮಾರ ಆಲಗೂರ, ಮುಖಂಡರಾದ ಯಮನಪ್ಪ ಚಿಚಖಂಡಿ, ಸಚಿವ ಮುಳ್ಳೂರ, ಹಣಮಂತ ತೇಲಿ, ಯಲ್ಲಾಲಿಂಗ ಅಡಿಹುಡಿ, ಕಲ್ಮೇಶ ತಳವಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾರ್ಚ್ 24 ರಿಂದ ಮದಗದಕೆರೆ ತೂಬು ತೆರವು: ಶಾಸಕ ಆನಂದ್
ಎಸ್ಟಿಗೆ 7% ಮೀಸಲಾತಿ ನೀಡಲು ಆಗ್ರಹ