ಕನ್ನಡಪ್ರಭ ವಾರ್ತೆ ಮಡಿಕೇರಿ
ಅವರು ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿ, ನನಗೂ ವಿನಯ್ ಸೋಮಯ್ಯ ಅವರಿಗೂ ಯಾವುದೇ ಸಂಪರ್ಕವಿರಲಿಲ್ಲ. ನಾನವರೊಂದಿಗೆ ಮಾತು ಕೂಡ ಆಡಲಿಲ್ಲ. ಅಲ್ಲದೇ ಅವರ ಮೇಲೆ ದೂರು ನೀಡುವಂತೆ ಕೂಡ ನಾನು ಹೇಳಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನನ್ನ ತೇಜೋವಧೆ ಮಾಡಿರುವುದು ಮತ್ತು ಅವರ ವಿರುದ್ಧ ಪೊಲೀಸ್ ದೂರು ದಾಖಲಾಗಿರುವುದು ನಂತರವೇ ನನಗೆ ಗೊತ್ತಾಯಿತು. ಈ ಬಗ್ಗೆ ರಾಜ್ಯ ಉಚ್ಚನ್ಯಾಯಾಲಯದಿಂದ ತಡೆಯಾಜ್ಞೆ ಇರುವುದರಿಂದ ನಾನು ಪೊಲೀಸರ ಮೇಲೆ ಒತ್ತಡ ಹಾಕುವಂತಹ ಪ್ರಶ್ನೆಯೇ ಇಲ್ಲ ಎಂದರು.
ಬಿಜೆಪಿಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ:ಪ್ರಕರಣದಲ್ಲಿ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮಾಡುತ್ತಾರೆ. ಆದರೆ ಬಿಜೆಪಿಯವರು ಪೊಲೀಸ್ ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಡಿಸಿಪಿಗೆ ಕೊಡಗಿನಿಂದ ಬಿಜೆಪಿ ನಾಯಕರು ಫೋನ್ ಮಾಡಿದ್ದಾರೆ. ಸಾವು ಆದ ಸಂದರ್ಭ ನಾವು ಕುಟುಂಬಸ್ಥರೊಂದಿಗೆ ಇರಬೇಕು. ಕುಟುಂಬಸ್ಥರೊಂದಿಗೆ ನಾನು ಈಗಾಗಲೇ ಮಾತನಾಡಿದ್ದೇನೆ. ಬಿಜೆಪಿಯವರು ಸಾವಿನ ಮೇಲೆ ರಾಜಕಾರಣ ಮಾಡುತ್ತಾರೆ. ತಡೆಯಾಜ್ಞೆ ಆಗಿದೆ ಎಂದರೆ ಯಾವ ಪೊಲೀಸ್ ಕೂಡ ಏನೂ ಮಾಡಲು ಸಾಧ್ಯವಿಲ್ಲ ಎಂದರು.
--------------------
ಮಡಿಕೇರಿ: ವಿನಯ್ ಡೆತ್ ನೋನ್ನಲ್ಲಿ ನನ್ನ ಹೆಸರು ಬಂದಿರುವುದು ಆಶ್ಚರ್ಯ ಉಂಟು ಮಾಡಿದೆ ಎಂದು ಶಾಸಕ ಡಾ. ಮಂಥರ್ ಗೌಡ ಪ್ರತಿಕ್ರಿಯಿಸಿದ್ದಾರೆ.
ವಿನಯ್ ಸಾವು ನನಗೂ ನೋವು ತಂದಿದೆ. ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳುತ್ತೇನೆ. ಕುಟುಂಬದ ನೆರವಿಗೆ ಸದಾ ಇರುತ್ತೇನೆ. ಪ್ರಕರಣದ ಸತ್ಯಾಸತ್ಯತೆ ಹೊರ ಬರಲಿ ಎಂದು ಕೋರುತ್ತೇನೆ ಎಂದು ಹೇಳಿದ್ದಾರೆ.