ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಸಮಾಜದ ಕುರಿತು ಚಿಂತನೆ, ಕಾಳಜಿ ವಹಿಸಬೇಕು. ಇದರಿಂದ ನಮ್ಮ ಸಮಾಜ ಹಾಗೂ ದೇಶ ಅಭಿವೃದ್ಧಿ ಸಾಧಿಸಲು ಪೂರಕಗುತ್ತದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ತಿಳಿಸಿದರು.
ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಗುಣ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿರುವ ಅನಾಚಾರ, ಅನಿಷ್ಟ ಪದ್ಧತಿಯನ್ನು ನಿರ್ಮೂಲನೆ ಮಾಡುವಂತವರಾಗಬೇಕು. ಸಮಾಜಕ್ಕೆ ಸತ್ಕಾರ್ಯಗಳನ್ನು ಮಾಡುವ ಗುಣವನ್ನು ವಿದ್ಯಾರ್ಥಿ ದೆಸೆಯಿಂದಲೆ ರೂಢಿಸಿಕೊಳ್ಳಬೇಕು. ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದವರನ್ನು ಆದರ್ಶವಾಗಿಟ್ಟುಕೊಂಡು, ಅವರಂತೆ ನೀವೂ ಕೂಡ ಸಮಾಜ ಹಾಗೂ ದೇಶಕ್ಕೆ ಉತ್ತಮ ಕೊಡುಗೆ ನೀಡಿ ಜೀವನದಲ್ಲಿ ಯಶಸ್ಸನ್ನು ಸಾಧಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಾಲೆಗಳು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ರಕ್ಷಣೆಯ ಕೇಂದ್ರಗಳಾಗಬೇಕು. ಮಕ್ಕಳ ರಕ್ಷಣೆಗಾಗಿ ಕಾನೂನುಗಳು ಜಾರಿಗೆ ಬಂದಿದೆ. ರಾಜ್ಯ ಮಕ್ಕಳ ಆಯೋಗವು ಸಂವಿಧಾನ್ಮತವಾಗಿ ರಚಿತವಾಗಿದ್ದು, ಮಕ್ಕಳು ಅನುಭವಿಸುತ್ತಿರುವ ಕಿರುಕುಳ ನಾವು ಗಮನಿಸುತ್ತಿದ್ದೇವೆ. ಮಕ್ಕಳು ಯಾವ ಸಮಸ್ಯೆ ಎದುರಿಸುತ್ತಿದ್ದಾರೆ, ಪರಿಹಾರ, ಮುಂಜಾಗ್ರತೆಯು ಆಯೋಗದ ಚಿಂತನೆಯಾಗಿದೆ. 18 ವರ್ಷದ ಕೆಳಗಿನ ಮಕ್ಕಳು ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕು. ಮಕ್ಕಳ ಸೇವೆ ದೇವರ ಸೇವೆ ಎಂಬ ಚಿಂತನೆಯಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಮಕ್ಕಳು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಮಕ್ಕಳಿಗೆ ಸಹಾಯವಾಣಿಗೆ ಕರೆ ಮಾಡಲು ಸೂಚಿಸಿದರು.ಮಕ್ಕಳ ಅಹವಾಲು:
ತೆರೆದ ಮನೆ: ಜಾಗೃತಿ ಮೂಡಿಸಿ:
ಶಾಲೆಯನ್ನು ಬಿಟ್ಟ ವಿದ್ಯಾರ್ಥಿಗಳ ಪಟ್ಟಿ ತಯಾರಿಸಿ ಆ ವಿದ್ಯಾರ್ಥಿಯ ಮನೆ, ಅವರು ಕೆಲಸ ಮಾಡುವ
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜಿನಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಲಕ್ಷ್ಮೀ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ರಾಜಣ್ಣ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಭೇಟಿ ಸಭೆ ನಡೆಸಿದರು.
21ಕೆಡಿಬಿಪಿ6- ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರಿಗೆ ಮಕ್ಕಳು ವಿವಿಧ ಅಹವಾಲುಗಳನ್ನು ಮುಂದಿಟ್ಟರು.