ಕನ್ನಡಪ್ರಭ ವಾರ್ತೆ ಮೈಸೂರು
ಈ ವೇಳೆ ಮಾತನಾಡಿದ ಅವರು, ನೆರೆ ರಾಜ್ಯಗಳ ಕಪ್ಪು ಹಣ ತಂದು ರಾಜ್ಯದ ಜನರಿಗೆ ಹಿಂಸೆ ಕೊಡುವ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ತಲೆ ಎತ್ತಿರುವ ಅಕ್ರಮ ಫೈನಾನ್ಸ್ ಕಂಪನಿಗಳನ್ನು ರದ್ದು ಮಾಡಬೇಕು. ಫೈನಾನ್ಸ್ ಕಂಪನಿಗಳ ವಿರುದ್ಧ ನಿವೃತ್ತ ನ್ಯಾಯಾಧೀಶ ನೇಮಕ ಮಾಡಿ ತನಿಖೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಕರ್ನಾಟಕ ಬಂದ್ ಗೂ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಾರಿ ನಿರ್ದೇಶನಾಲಯದವರೇ, ನಿಮಗೆ ತಾಕತ್ತಿದ್ದರೆ ಮೈಕ್ರೋ ಫೈನಾನ್ಸ್ ಮೇಲೆ ದಾಳಿ ಮಾಡಿ. ಮೈಕ್ರೋ ಫೈನಾನ್ಸ್ ಸಾಲ ದೌರ್ಜನ್ಯ ನಿಲ್ಲಿಸಿ, ಹಿಂಸೆ ಕೊಡಬಾರದು. ಮನೆಗಳಿಗೆ ಬೀಗ ಹಾಕಬಾರದು. ಆತ್ಮಹತ್ಯೆ ಮಾಡಿಕೊಂಡವರಿಗೆ ಒಂದೊಂದು ಕೋಟಿ ರೂ. ಪರಿಹಾರ ಕೊಡಬೇಕು ಎಂದು ಅವರು ಒತ್ತಾಯಿಸಿದರು.ಅಸಲಿಗಿಂತ ಬಡ್ಡಿ ವಸೂಲಿ ಜಾಸ್ತಿಯಾಗಿರುವುದರಿಂದ ಸಮಗ್ರವಾಗಿ ತನಿಖೆ ಆಗಬೇಕು. ರೌಡಿಗಳ ಮೂಲಕ ಬೆದರಿಕೆ ಹಾಕುವುದು, ಮನೆಗೆ ನುಗ್ಗುವುದು, ಮನೆಗಳಿಗೆ ಬೀಗ ಹಾಕುವುದು ನಿಲ್ಲಬೇಕು. ಇದುವರೆವಿಗೂ ಮೈಕ್ರೋ ಫೈನಾನ್ಸ್ ಸಾಲದಿಂದ ಆಗಿರುವ ಸಾವು- ನೋವುಗಳ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಲೇಬೇಕು. ಸರ್ಕಾರ ಇಡೀ ರಾಜ್ಯಾದ್ಯಂತ ತೀವ್ರ ಎಚ್ಚರ ವಹಿಸಬೇಕು. ಆತ್ಮಹತ್ಯೆ ನಿಲ್ಲಬೇಕು, ಮೀಟರ್ ಬಡ್ಡಿ ದುರಂತ ತಪ್ಪಬೇಕು ಎಂದು ಅವರು ಆಗ್ರಹಿಸಿದರು.
ಕೇಂದ್ರದಿಂದ ಮಲತಾಯಿ ಧೋರಣೆ
----
ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ರಾಜ್ಯದಲ್ಲಿ ಇರೋದರಲ್ಲಿ ಒಬ್ಬ ಒಳ್ಳೆಯ ವ್ಯಕ್ತಿ. ಇವರೇ ಕೊನೆಯ ಕೊಂಡಿ, ಈ ಕೊಂಡಿ ಕಳಚಿದರೆ ರಾಜ್ಯ ದಿಕ್ಕೆಟ್ಟು ಹೋಗುತ್ತದೆ. ಸಿದ್ದರಾಮಯ್ಯ ಅವರನ್ನು ತೆಗೆಯಲು ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ನ ಕೆಲವರು ಪಿತೂರಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದರು.