ಕನ್ನಡಪ್ರಭ ವಾರ್ತೆ ಬ್ಯಾಡಗಿ
ಜಾತ್ರಾ ಮಹೋತ್ಸವದ ಅಂಗವಾಗಿ ಪಟ್ಟಣವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆಯಿಂದಲೇ ಎರಡೂ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಹವನ ಹೋಮ ಸೇರಿದಂತೆ ಹಲವು ಪೂಜಾ ಕೈಂಕರ್ಯಗಳು ಜರುಗಿದವು.
ಪಟ್ಟಣದ ವಿವಿಧ ಮನೆಗಳಲ್ಲಿ ಪೂಜಿಸಲಾಗುವ ಶ್ರೀ ವೀರಭದ್ರೇಶ್ವರ ಮೂರ್ತಿಗಳನ್ನು (ಹಲಗೆ) ಜಾತ್ರೆ ವೇಳೆ ವೀರಭದ್ರೇಶ್ವರ ದೇವಸ್ಥಾನಕ್ಕೆ ತರಲಾಗುತ್ತದೆ. ಅಂತೆಯೇ ಬೆಳಗಿನ ಜಾವದಿಂದ ಮೂರ್ತಿಗಳ ಕ್ರೂಢೀಕರಣ ನಡೆಯಿತು.ದೇವಸ್ಥಾನದಿಂದ ಸಣ್ಣತೇರಿನಲ್ಲಿ ಶ್ರೀ ವೀರಭದ್ರೇಶ್ವರ ದೇವರನ್ನು ಗುಗ್ಗಳ ಕೊಡಗಳೊಂದಿಗೆ ಪುರವಂತರ ಶಾಸ್ತ್ರಬದ್ಧ ವಡಪುಗಳೊಂದಿಗೆ ಮೆರವಣಿಗೆ ಜರುಗಿತು. ಈ ವೇಳೆ ಸಾವಿರಾರು ಸಂಖ್ಯೆಯ ಭಕ್ತರು ಗುಗ್ಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಾಮಿ ಕೃಪೆಗೆ ಪಾತ್ರರಾದರು.
ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಒಟ್ಟು 4 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪಟ್ಟಣದ ಪಾಠ ಶಾಲೆಯ ವೇದಮೂರ್ತಿ ರಾಚಯ್ಯ ಒದೋಸಿಮಠ ನೇತೃತ್ವ ವಹಿಸಿದ್ದರು.
ಈ ವೇಳೆ ಸಮಿತಿಯ ಮಾಲತೇಶ ಅರಳಿಮಟ್ಟಿ, ಶಂಭಣ್ಣ ಅಂಗಡಿ, ಸಿ.ಆರ್. ಆಲದಗೇರಿ, ಶಿವಣ್ಣ ಶೆಟ್ಟರ, ಗಂಗಾಧರ ತಿಳವಳ್ಳಿ, ಶಿವಣ್ಣ ಬಣಕಾರ ಸೇರಿದಂತೆ ಹಲವರಿದ್ದರು.