ವಿರಾಜಪೇಟೆ: ಸರ್ಕಾರಿ ಕಾಲೇಜಿನಲ್ಲಿ ಮತದಾನ ಜಾಗೃತಿ ಉಪನ್ಯಾಸ

KannadaprabhaNewsNetwork |  
Published : Mar 28, 2024, 12:55 AM IST
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿರಾಜಪೇಟೆಯ ಐ.ಕ್ಯೂ.ಎ.ಸಿ, ರಾಜ್ಯಶಾಸ್ತç ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿಯ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಮತದಾನ ಜಾಗೃತಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅತಿಥಿಗಳು ಉದ್ಘಾಟಿಸಿದರು .   | Kannada Prabha

ಸಾರಾಂಶ

ವಿರಾಜಪೇಟೆಯ ಐ.ಕ್ಯೂ.ಎ.ಸಿ, ರಾಜ್ಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಬುಧವಾರ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮತದಾನ ಜಾಗೃತಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿರಾಜಪೇಟೆಯ ಐ.ಕ್ಯೂ.ಎ.ಸಿ, ರಾಜ್ಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಮತದಾನ ಜಾಗೃತಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ನಿರ್ಮಲಾ ಎಚ್‌.ಪಿ. ಮಾತನಾಡಿ, ಇಂದಿನ ಯುವ ಸಮುದಾಯವು ಮತದಾನವನ್ನು ಕೇವಲ ಹಕ್ಕು ಎಂದು ಪರಿಗಣಿಸದೆ ದೇಶದ ಜವಾಬ್ದಾರಿಯುತ ನಾಗರಿಕನಾಗಿ ಮತದಾನ ನನ್ನ ಕರ್ತವ್ಯವೆಂದು ಭಾವಿಸಬೇಕು. ಸದೃಢ ಭಾರತವನ್ನು ನಿರ್ಮಿಸುವಲ್ಲಿ ವಿವೇಚನೆಯಿಂದ ನಮ್ಮ ರಾಜಕೀಯ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮೂಲಕ ಭವಿಷ್ಯದ ಭಾರತ ನಿರ್ಮಿಸಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ ದಯಾನಂದ ಮಾತನಾಡಿ, ವಿದ್ಯಾವಂತ ಯುವಜನತೆ ಮತದಾನದಂತಹ ರಾಜಕೀಯ ಚಟುವಟಿಕೆಗಳನ್ನು ಅಸಡ್ಡೆಯಿಂದ ಕಾಣುತ್ತಿದ್ದು, ಇದು ನಮ್ಮ ದೇಶದ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಯುವಜನತೆಯು ಹೆಚ್ಚು ಪರಿಣಾಮಕಾರಿಯಾಗಿ ಈ ಕುರಿತು ಆಲೋಚಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನ ಮಾಡುವ ಮೂಲಕ ಭವ್ಯ ಭಾರತದ ನಿರ್ಮಾನಕ್ಕೆ ನಾಂದಿ ಹಾಡಲು ಮುಂದಾಗಬೇಕೆಂದು ಕಿವಿಮಾತು ಹೇಳಿದರು.

ಕಾಲೇಜಿನ ಚುನಾವಣಾ ಸಾಕ್ಷರತಾ ಸಮಿತಿ ಕ್ಯಾಂಪಸ್ ರಾಯಭಾರಿ ತೃತೀಯ ಬಿ.ಕಾಂ.ನ ಸಚಿನ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರಥಮ ಬಿ.ಎ. ವಿದ್ಯಾರ್ಥಿ ಕೀರ್ತನಾ ಮತದಾನ ಜಾಗೃತಿ ಗೀತೆ ಹಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ದಿವ್ಯಾ ಆರ್. ಮತ್ತು ಚುನಾವಣಾ ಸಾಕ್ಷರತಾ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ದಿವ್ಯ ಎಂ.ಬಿ. ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!