ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಆಶ್ರಯದಲ್ಲಿ ಕನಾ೯ಟಕ ಸುವರ್ಣ ಸಂಭ್ರಮ- ೫೦ರ ನಿಮಿತ್ತ ಜಿಲ್ಲಾ ಮಟ್ಟದ ಸಾಂಸ್ಕೃತಿಕ ನೃತ್ಯಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಭೆ ದೈವದತ್ತವಾದದ್ದು. ಅದಕ್ಕೆ ವೇದಿಕೆ ಅವಶ್ಯಕತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಒದಗಿಸಿಕೊಟ್ಟಿದೆ ಎಂದರು.
ವಿಶ್ರಾಂತ ಪ್ರಾಚಾರ್ಯ ಬಿ.ಎಂ ಅಜೂರ ಮಾತನಾಡಿ, ಎಂಟು ಪ್ರಕಾರದ ಶಾಸ್ತ್ರೀಯ ನೃತ್ಯಗಳಿವೆ. ಭರತನಾಟ್ಯಕ್ಕೆ ಸಾವಿರಾರು ವರ್ಷದ ಇತಿಹಾಸ ಹೊಂದಿದೆ. ತಾಂಡವ ನೃತ್ಯ ಅತ್ಯಂತ ಪ್ರಾಚೀನವಾದದ್ದು. ಶಿವ ತಾಂಡವ ನೃತ್ಯ ಪ್ರಖ್ಯಾತ ಹೊಂದಿದೆ. ಇಂದು ಜಿಲ್ಲೆಯ ಎಲ್ಲ ನೃತ್ಯ ಕಲಾವಿದರಿಗೆ ಈ ವೇದಿಕೆ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು.ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿಜಯಕುಮಾರ ಘಾಟಗೆ ಮಾತನಾಡಿ, ಸಂಗೀತ ಮತ್ತು ಸಾಹಿತ್ಯಕ್ಕೆ ಚಿಂತೆಯನ್ನು ದೂರ ಮಾಡುವ ಶಕ್ತಿ ಇದೆ. ಇದನ್ನು ಜಿಲ್ಲೆಯಾದ್ಯಂತ ಚಟುವಟಿಕೆ ಮಾಡುತ್ತಿರುವದು ಹೆಮ್ಮೆಯ ವಿಚಾರ ಎಂದು ತಿಳಿಸಿದರು.