ಕನ್ನಡಪ್ರಭ ವಾರ್ತೆ ಭಾಲ್ಕಿ
ವಿಸಾಜಿಯವರು ಅಧ್ಯಾಪಕರಾಗಿ, ಕನ್ನಡದ ವಾತಾವರಣ ನಿರ್ಮಾಣ ಮಾಡಿದ್ದರು. ಡಾ.ಚನ್ನಬಸವ ಪಟ್ಟದ್ದೇವರ ಕುರಿತು ಡಾ.ವಿಸಾಜಿ ಅವರು ಮೊದಲ ಸಾಹಿತ್ಯ ಕೃತಿ ಹೊರ ತಂದಿದ್ದರು. ಅವರು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಜತೆಗೆ ವಚನ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು.
ಅಪಾರ ಶಿಷ್ಯ ಬಳಗ ಹೊಂದಿರುವ ವಿಸಾಜಿ ಅವರು ತಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಿದ್ದಾರೆ. ಅವರ ಪುತ್ರ ಡಾ.ವಿಕ್ರಮ ವಿಸಾಜಿ ಅವರು ಕೂಡ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಕೃಷಿ ಮಾಡುತ್ತಿರುವುದು ಹೆಮ್ಮೆ ತರಿಸಿದೆ ಎಂದು ಹೇಳಿದರು.ಗುರುಮಠಕಲ್ ಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವ ವಹಿಸಿ ಮಾತನಾಡಿ, ಹಿರೇಮಠ ಸಂಸ್ಥಾನ ನಿರಂತರವಾಗಿ ಶರಣ ಸಂಸ್ಕೃತಿ ಪಸರಿಸುವ ಕಾರ್ಯ ಮಾಡುತ್ತಿರುವುದು ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದು ತಿಳಿಸಿದರು.
ನಿವೃತ್ತ ಪ್ರಾಧ್ಯಾಪಕರಾದ ಡಾ.ವೈಜಿನಾಥ ಭಂಡೆ, ಡಾ.ಚಂದ್ರಶೇಖರ ಬಿರಾದಾರ್, ಡಾ.ಭೀಮಾಶಂಕರ ಬಿರಾದಾರ್, ಡಾ.ವಿಕ್ರಮ ವಿಸಾಜಿ ಅವರು ಡಾ.ಜಿ.ಬಿ.ವಿಸಾಜಿ ಅವರ ಕುರಿತು ಮಾತನಾಡಿದರು.ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ ಬಸವ ಗುರುವಿನ ಪೂಜೆ ನೆರವೇರಿಸಿದರು. ಎಂ.ಬಂಡೆಪ್ಪ ಶರಣರು ಧರ್ಮಗ್ರಂಥ ಪಠಣ ಮಾಡಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಂಭುಲಿಂಗ ಕಾಮಣ್ಣ ಅಧ್ಯಕ್ಷತೆ ವಹಿಸಿದರು.
ಈ ವೇಳೆ ಶರಣಯ್ಯ ಮಠಪತಿ, ವಿಶ್ವನಾಥಪ್ಪ ಬಿರಾದಾರ, ಬಸವರಾಜ ಮರೆ, ಓಂಪ್ರಕಾಶ ರೊಟ್ಟೆ, ಚನ್ನಬಸವ ವಿಸಾಜಿ ಸೇರಿದಂತೆ ಹಲವರು ಇದ್ದರು.