ಹದಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ ವಿಶ್ವ ಕರವೇ ಪ್ರತಿಭಟನೆ

KannadaprabhaNewsNetwork |  
Published : Dec 06, 2024, 08:56 AM IST
4ಕೆಡಿವಿಜಿ5-ದಾವಣಗೆರೆಯ ಹದಡಿ ರಸ್ತೆ ದುರಸ್ಥಿಗೆ ಒತ್ತಾಯಿಸಿ ವಿಶ್ವ ಕರವೇ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಬುಧವಾರ ಪ್ರತಿಭಟಿಸಲಾಯಿತು. ..............4ಕೆಡಿವಿಜಿ6, 7-ದಾವಣಗೆರೆಯ ಹದಡಿ ರಸ್ತೆ ದುರಸ್ಥಿಗೆ ಒತ್ತಾಯಿಸಿ ವಿಶ್ವ ಕರವೇ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಬುಧವಾರ ಪ್ರತಿಭಟಿಸಿ, ಲೋಕೋಪಯೋಗಿಇಲಾಖೆಗೆ ಮನವಿ ಅರ್ಪಿಸಲಾಯಿತು. | Kannada Prabha

ಸಾರಾಂಶ

ನಗರದ ಹದಡಿ ರಸ್ತೆಯಲ್ಲಿ ಮೊಣಕಾಲುದ್ದ ಗುಂಡಿಗಳು ಸೃಷ್ಟಿಯಾಗಿ ವಾಹನಗಳು, ಪಾದಚಾರಿಗಳ ಸುಗಮ ಸಂಚಾರ ಅಸಾಧ್ಯವಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಕಡೆಗಣನೆಗೆ ಒಳಗಾಗಿರುವ ರಸ್ತೆ ಶೀಘ್ರ ದುರಸ್ತಿಗೆ ಆಗ್ರಹಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ದಾವಣಗೆರೆ

ನಗರದ ಹದಡಿ ರಸ್ತೆಯಲ್ಲಿ ಮೊಣಕಾಲುದ್ದ ಗುಂಡಿಗಳು ಸೃಷ್ಟಿಯಾಗಿ ವಾಹನಗಳು, ಪಾದಚಾರಿಗಳ ಸುಗಮ ಸಂಚಾರ ಅಸಾಧ್ಯವಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಕಡೆಗಣನೆಗೆ ಒಳಗಾಗಿರುವ ರಸ್ತೆ ಶೀಘ್ರ ದುರಸ್ತಿಗೆ ಆಗ್ರಹಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಜಯದೇವ ವೃತ್ತದ ಬಳಿಯಿಂದ ವಿಶ್ವ ಕರವೇ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ, ಜಿಲ್ಲಾಧ್ಯಕ್ಷ ಬಾಬುರಾವ್ ನೇತೃತ್ವದಲ್ಲಿ ವೇದಿಕೆ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಅನಂತರ ಲೋಕೋಪಯೋಗಿ ಇಲಾಖೆ ಕಚೇರಿಗೆ ತೆರಳಿ, ಶೀಘ್ರ ದುರಸ್ತಿಗೆ ಆಗ್ರಹಿಸಿ ಮನವಿ ಅರ್ಪಿಸಿದರು.

ವೇದಿಕೆ ರಾಜ್ಯಾಧ್ಯಕ್ಷ ಕೆ.ಜಿ.ಯಲ್ಲಪ್ಪ ಈ ಸಂದರ್ಭ ಮಾತನಾಡಿ, ನಗರದ ಹದಡಿ ರಸ್ತೆ ಅಭಿವೃದ್ಧಿಯನ್ನು ಲೋಕೋಪಯೋಗಿ ಇಲಾಖೆ ಸಂಪೂರ್ಣ ಮರೆತಿದೆ. ಇಲ್ಲಿನ ಶ್ರೀ ಜಯದೇವ ವೃತ್ತ, ಡಾ.ಅಂಬೇಡ್ಕರ್ ವೃತ್ತ, ವಿದ್ಯಾರ್ಥಿ ಭವನ ಹಾದುಹೋಗುವ ಹದಡಿ ರಸ್ತೆಯು ಅನೇಕ ತಿಂಗಳುಗಳಿಂದ ಹಾಳಾಗಿದೆ. ರಸ್ತೆ ದುರಸ್ತಿಗೆ ಮಾತ್ರ ಅಧಿಕಾರಿಗಳು ಗಮನಹರಿಸುತ್ತಿಲ್ಲ ಎಂದು ದೂರಿದರು.

ವಿದ್ಯಾರ್ಥಿ ಭವನದಿಂದ ಸ್ವಲ್ಪ ದೂರದಲ್ಲಿ ಒಂದೇ ಕಡೆ 25-30 ಗುಂಡಿಗಳಿವೆ. ಸಣ್ಣ ಗುಂಡಿ, ದೊಡ್ಡ ಗುಂಡಿಗಳೆಲ್ಲ ಮಳೆನೀರು, ತ್ಯಾಜ್ಯ ನೀರಿನಿಂದ ತುಂಬಿರುತ್ತವೆ. ಗುಂಡಿಗಳ ಆಳ ಗೊತ್ತಿಲ್ಲದೇ ಸಾಕಷ್ಟು ವಾಹನ ಚಾಲಕರು, ಸೈಕಲ್‌ ಸವಾರರು ತೊಂದರೆ ಅನುಭವಿಸಿದ್ದಾರೆ. ಜೀವವನ್ನು ಕೈಯಲ್ಲಿ ಹಿಡಿದುಕೊಂಡೇ ಸಂಚರಿಸುವಷ್ಟು ದುಸ್ಥಿತಿ ಇದೆ ಎಂದು ಕಿಡಿಕಾರಿದರು.

ಜಿಲ್ಲಾಧ್ಯಕ್ಷ ಬಾಬುರಾವ್ ಮಾತನಾಡಿ, ನಿತ್ಯ ಈ ರಸ್ತೆಯಲ್ಲಿ 30ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ರೋಗಿಗಳು, ತುರ್ತು ಚಿಕಿತ್ಸೆಗಾಗಿ ಗಾಯಾಳುಗಳನ್ನು, ಗರ್ಭಿಣಿಯರನ್ನು ಆಸ್ಪತ್ರೆಗೆ ಕರೆದೊಯ್ಯುತ್ತವೆ. ಆದರೆ, ಗುಂಡಿಗಳೇ ತುಂಬಿ ಅಂಕುಡೊಂಕಿನಂತೆ ಚಲಿಸಬೇಕಾದ ಈ ರಸ್ತೆಯಲ್ಲಿ ರೋಗಿಗಳ ಪರಿಸ್ಥಿತಿ, ವಾಹನಗಳ ಗತಿ ಏನಾದೀತೆಂಬ ಕನಿಷ್ಠ ಪ್ರಜ್ಞೆ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಇಲ್ಲವೇ? ಶೀಘ್ರ ಗುಂಡಿಬಿದ್ದ ರಸ್ತೆಗಳನ್ನು ಸೂಕ್ತವಾಗಿ ಮುಚ್ಚಿಸಬೇಕು. ದುರಸ್ಥಿಗೆ ಕ್ರಮ ಕೈಗೊಳ್ಳದಿದ್ದರೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಸಾಮೂಹಿಕವಾಗಿ ವರ್ಗಾವಣೆಗೆ ಆಗ್ರಹಿಸಿ, ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಮುಖಂಡರಾದ ಅಮ್ಜದ್ ಅಲಿ, ಆಜಮ್ ರಜ್ವಿ, ಎಸ್.ಸಿದ್ದೇಶ, ಸಂತೋಷ ದೊಡ್ಮನಿ, ಮೆಹಬೂಬ್‌, ದಯಾನಂದ, ನಾಗರಾಜ, ಭೀಮಪ್ಪ, ಅಣ್ಣೇಶ, ಪೃಥ್ವಿ, ರಮೇಶ, ಕಿರಣ್, ಅವಿನಾಶ್, ಶಾರೂಖ್‌ ಹಾಷ್ಮಿ, ಜಬೀವುಲ್ಲಾ, ಬಸವರಾಜ, ರವಿಕುಮಾರ, ಆನಂದ, ಮಂಜುನಾಥ, ಯತಿರಾಜ ಇತರರು ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...