ಕನ್ನಡಪ್ರಭ ವಾರ್ತೆ ಕೆಜಿಎಫ್
ನಗರದ ತಾಲೂಕು ಆಡಳಿತ ಭವನದಲ್ಲಿ ವಿಶ್ವಗುರು ಜಗಜ್ಜೋತಿ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿ, ರಾಜ್ಯ ಸರ್ಕಾರ ವಿಶ್ವಗುರು ಬಸವಣ್ಣರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ನಮ್ಮೆಲ್ಲರ ಹೆಮ್ಮೆಯಾಗಿದ್ದು, ಅವರು ಜನಿಸಿದಂತಹ ಭೂಮಿಯಲ್ಲಿ ನಾವು ಜನಿಸಿರುವುದು ನಮ್ಮೆಲ್ಲರ ಭಾಗ್ಯವಾಗಿದೆ ಎಂದರು.
ಸಮಾನತೆಯ ಹಕ್ಕು ಪ್ರತಿಪಾದನೆಅಹಿಂಸಾ ತತ್ವವನ್ನು ಬೋಧಿಸಿದ ಬುದ್ಧ, ಬಸವ, ಮಹಾತ್ಮಾಗಾಂಧಿ, ಅಂಬೇಡ್ಕರ್ ಎಲ್ಲ ಮಹನೀಯರು ತಮ್ಮ ತಮ್ಮ ಕಾಲಘಟ್ಟಗಳಲ್ಲಿ ಆರೋಗ್ಯಕರ, ಮನುಷ್ಯತ್ವದಿಂದ ಕೂಡಿದ ಸಾಮಾಜಿಕ ವ್ಯವಸ್ಥೆ ಬಯಸಿದವರು. ಜಾತೀಯತೆ, ಮೌಢ್ಯ ಕಂದಾಚಾರಗಳನ್ನು ತಮ್ಮದೇ ಆದ ರೀತಿಯಲ್ಲಿ ವಿರೋಧಿಸುವ ಮೂಲಕ ಎಲ್ಲರಿಗೂ ಸಮಾಜದಲ್ಲಿ ಬದುಕುವ ಹಕ್ಕಿದೆ ಎಂದು ಸಾರಿದಂತಹವರಾಗಿದ್ದಾರೆ, ಸಮಾಜದಲ್ಲಿನ ಮೇಲು, ಕೀಳು, ಬಡವ, ಬಲ್ಲಿದ ಎಂಬ ಅಸಮಾನತೆಗಳನ್ನು ತೊಲಗಿಸಿ ಎಲ್ಲರೂ ಗೌರವದಿಂದ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕೆಂಬ ದಿಸೆಯಲ್ಲಿ ಬಸವಣ್ಣನವರು ಶ್ರಮಿಸಿದ್ದರು. ಅವರ ಹಾದಿಯಲ್ಲಿ ನಾವು ನಡೆದಲ್ಲಿ ನವ ಸಮಾಜ, ಸಮ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದರು. ವಚನಗಳ ಮೂಲಕ ಜನಜಾಗೃತಿ
ಸಮ ಪಾಲು, ಸಮ ಬಾಳು
ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗವೇಣಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ನರಸಿಂಹಮೂರ್ತಿ, ಶಿಕ್ಷಕ ಅಶ್ವತ್ಥ್ ಗ್ರಾಮ ಆಡಳಿತಾಧಿಕಾರಿಗಳಾದ ವಿನೀತ್, ಅಂಬರೀಷ್ ಇದ್ದರು.